ಪಂದ್ಯ ಶ್ರೇಷ್ಠ ಯೂಸುಫ್ ಪಠಾಣ್ (ಕ್ರಿಕ್ ಇನ್ಫೋ ಚಿತ್ರ) 
ಕ್ರಿಕೆಟ್

ಪ್ಲೇ ಆಫ್ ಕನಸು ನನಸು ಮಾಡಿಕೊಂಡ ಕೆಕೆಆರ್

ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಸಾಂಘಿಕ ಹೋರಾಟ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆಲ್ಲುವ ಮೂಲಕ ಐಪಿಎಲ್-9 ಟೂರ್ನಿಯ ಪ್ಲೇ ಆಫ್ ಸುತ್ತು ಪ್ರವೇಶಿಸಿದೆ...

ಕೋಲ್ಕತಾ: ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಸಾಂಘಿಕ ಹೋರಾಟ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು  ಗೆಲ್ಲುವ ಮೂಲಕ ಐಪಿಎಲ್-9 ಟೂರ್ನಿಯ ಪ್ಲೇ ಆಫ್ ಸುತ್ತು ಪ್ರವೇಶಿಸಿದೆ.

ಯೂಸುಫ್ ಪಠಾಣ್(ಅಜೇಯ 52ರನ್), ಮನೀಷ್ ಪಾಂಡೆ (48 ರನ್) ಭರ್ಜರಿ ಬ್ಯಾಟಿಂಗ್ ಮತ್ತು ಸುನಿಲ್ ನರೇನ್ (26 ಕ್ಕೆ 3) ಮತ್ತು ಕುಲ್​ದೀಪ್ ಯಾದವ್ (28 ಕ್ಕೆ 2) ಭರ್ಜರಿ ಬೌಲಿಂಗ್  ಕೋಲ್ಕತಾ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ನಿರ್ವಹಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಕೋಲ್ಕತ ನೈಟ್ ರೈಡರ್ಸ್ ತಂಡದ ಮೊತ್ತ 57 ರನ್  ಆಗುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಆತಂಕಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಒಂದಾದ ಯೂಸುಫ್ ಪಠಾಣ್ (ಅಜೇಯ 52) ಮತ್ತು ಮನೀಷ್ ಪಾಂಡೆ (48ರನ್) ತಂಡಕ್ಕೆ  ಆಸರೆ ಒದಗಿಸಿದರು. 4ನೇ ವಿಕೆಟ್​ಗೆ 87 ರನ್ ಜತೆಯಾಟವಾಡಿದ ಈ ಜೋಡಿ ತಂಡ ಸವಾಲಿನ ಮೊತ್ತ ಗಳಿಸಲು ನೆರವಾದರು. ಪಾಂಡೆ ಔಟಾದ ನಂತರ ಕ್ರೀಸ್​ಗೆ ಬಂದ ಬ್ಯಾಟ್ಸ್​ಮನ್​ಗಳು  ಅಲ್ಪ ಕಾಣಿಕೆ ನೀಡುವ ಮೂಲಕ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು.

ಕೆಕೆಆರ್ ನೀಡಿದ 172 ರನ್ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಕೆಕೆಆರ್  ವಿರುದ್ಧ 20 ರನ್​ಗಳಿಂದ ಸೋಲನುಭವಿಸಿತು. ಹೈದರಾಬಾದ್ ಪರ ಶಿಖರ್ ಧವನ್ (51) ಮಾತ್ರ ಕೊಂಚ ಪ್ರತಿರೋಧ ತೋರಿದರು. ಉಳಿದಂತೆ ಬೇರೆ ಬ್ಯಾಟ್ಸ್​ಮನ್​ಗಳು ನಿರೀಕ್ಷಿತ ಪ್ರದರ್ಶನ  ನೀಡದ ಕಾರಣ ತಂಡ ಸೋಲನುಭವಿಸಬೇಕಾಯಿತು. ಕೆಕೆಆರ್ ಪರ ಸುನಿಲ್ ನರೇನ್ 3 ಮತ್ತು ಕುಲ್​ದೀಪ್ ಯಾದವ್ 2 ವಿಕೆಟ್ ಪಡೆದರು. ಹೈದರಾಬಾದ್ ಪರ ದೀಪಕ್ ಹೂಡ (16 ಕ್ಕೆ 2)  ಪ್ರಭಾವಿ ಬೌಲಿಂಗ್ ದಾಳಿ ನಡೆಸಿದರು.

ಅಜೇಯ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೋಲ್ಕತಾದ ಯೂಸುಫ್ ಪಠಾಣ್ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT