ಆ್ಯರಾನ್ ಫಿಂಚ್ ವಿಕೆಟ್ ಪಡೆದ ಅಬ್ದುಲ್ಲಾ ಸಂಭ್ರಮ (ಕ್ರಿಕ್ ಇನ್ಫೋ ಚಿತ್ರ) 
ಕ್ರಿಕೆಟ್

ಆರ್ ಸಿಬಿ ಬೌಲರ್ ಗಳ ಪ್ರಾಬಲ್ಯ; 158 ರನ್ ಗಳಿಗೆ ಕುಸಿದ ಗುಜರಾತ್

ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 9 ಟೂರ್ನಿಯ ಪ್ಲೇ ಆಫ್ ಘಟ್ಟದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡಕ್ಕೆ ಗುಜರಾತ್ ಲಯನ್ಸ್ ತಂಡ 159 ರನ್ ಗಳ ಸವಾಲಿನ ಗುರಿ ನೀಡಿದೆ.

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 9 ಟೂರ್ನಿಯ ಪ್ಲೇ ಆಫ್ ಘಟ್ಟದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡಕ್ಕೆ ಗುಜರಾತ್ ಲಯನ್ಸ್ ತಂಡ 159 ರನ್ ಗಳ ಸವಾಲಿನ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಲಯನ್ಸ್ ತಂಡ ಆರಂಭಿಕ ಆಘಾತದ ನಡುವೆಯೂ 19.5 ಓವರ್ ಗಳಲ್ಲಿ 158 ರನ್ ಗಳಿಗೆ ಸರ್ವಪತನ ಕಂಡಿತು. ಆ ಮೂಲಕ ಬೆಂಗಳೂರು ತಂಡಕ್ಕೆ ಗೆಲ್ಲಲು 159 ರನ್ ಗಳ ಸವಾಲಿನ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಗುಜರಾತ್ ಲಯನ್ಸ್ ತಂಡಕ್ಕೆ ಆರ್ ಸಿಬಿಯ ಅಬ್ದುಲ್ಲಾ ಆರಂಭಿಕ ಆಘಾತ ನೀಡಿದರು. ಎರಡನೇ ಓವರ್ ನಲ್ಲಿಯೇ ಮೆಕ್ಕಲಮ್ ಮತ್ತು ಫಿಂಚ್ ಅವರ ವಿಕೆಟ್ ಪಡೆದರು. ಬಳಿಕ ಗುಜರಾತ್ ತಂಡದ ನಾಯಕ ಸುರೇಶ್ ರೈನಾ ಕ್ರೀಸ್ ಗೆ ಬರುತ್ತಿದ್ದಂತೆಯೇ ವಾಟ್ಸನ್ ಗೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆ ಗೂಡಿದ ಕಾರ್ತಿಕ್ ಮತ್ತು ಸ್ಮಿತ್ ಜೋಡಿ ಗುಜರಾತ್ ತಂಡ ಬ್ಯಾಟಿಂಗ್ ಗೆ ಬಲ ನೀಡುವ ಪ್ರಯತ್ನ ಮಾಡಿದರು. ಭರ್ಜರಿ ಬ್ಯಾಟಿಂಗ್ ಮಾಡಿದ ಸ್ಮಿತ್ 73 ರನ್ ಗಳಿಸಿ ಔಟ್ ಆದರು. ಬಳಿಕ ಬಂದ ಜಡೇಜಾ 3 ರನ್ ಗಳಿಸಿ ಔಟ್ ಆದರೆ, ಬ್ರಾವೋ 8 ರನ್ ಗಳಿಸಿ ವಾಟ್ಸನ್ ಗೆ ವಿಕೆಟ್ ಒಪ್ಪಿಸಿದರು.

ಅಂತಿಮ ಹಂತದಲ್ಲಿ ಆರ್ ಸಿಬಿ ಬೌಲರ್ ಗಳಿಗೆ ಪ್ರತಿರೋಧ ಒಡ್ಡುವ ಪ್ರಯತ್ನ ಮಾಡಿದ ದ್ವಿವೇದಿ ಗುಜರಾತ್ ಮೊತ್ತ 150ರ ಗಡಿ ದಾಟುವಂತೆ ನೋಡಿಕೊಂಡರು ಅಂತಿಮವಾಗಿ ಗುಜರಾತ್ ತಂಡ 19.5 ಓವರ್ ಗಳಲ್ಲಿ 158 ರನ್ ಗಳಿಸಿ ಆಲ್ ಔಟ್ ಆಯಿತು. ಆರ್ ಸಿಬಿ ಪರ ಅಬ್ದುಲ್ಲಾ ಮತ್ತು ಜೋರ್ಡನ್ ತಲಾ 2 ವಿಕೆಟ್ ಪಡೆದರೆ, ಶೇನ್ ವಾಟ್ಸನ್ 4 ವಿಕೆಟ್ ಪಡೆದು ಮಿಂಚಿದರು. ಚಹಾಲ್ 42 ರನ್ ನೀಡಿ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT