ಸುಪ್ರೀಂ ಕೋರ್ಟ್ 
ಕ್ರಿಕೆಟ್

ರಾಜ್ ಕೋಟ್ ಪಂದ್ಯಕ್ಕೆ ಹಣ ಬಿಡುಗಡೆ ಮಾಡಲು ಸುಪ್ರೀಂಗೆ ಬಿಸಿಸಿಐ ಮನವಿ

ರಾಜ್ ಕೋಟ್ ನಲ್ಲಿ ನ.9 ರಿಂದ ನಡೆಯಲಿರುವ ಭಾರತ-ಇಂಗ್ಲೆಂಡ್ ನಡುವಿನ ಪ್ರಥಮ ಟೆಸ್ಟ್ ಪಂದ್ಯಾವಳಿಗೆ ಹಣ ಬಿಡುಗಡೆ ಮಾಡಲು ಬಿಸಿಸಿಐ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.

ನವದೆಹಲಿ: ರಾಜ್ ಕೋಟ್ ನಲ್ಲಿ ನ.9 ರಿಂದ ನಡೆಯಲಿರುವ ಭಾರತ-ಇಂಗ್ಲೆಂಡ್ ನಡುವಿನ ಪ್ರಥಮ ಟೆಸ್ಟ್ ಪಂದ್ಯಾವಳಿಗೆ ಹಣ ಬಿಡುಗಡೆ ಮಾಡಲು ಬಿಸಿಸಿಐ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ. 
ಲೋಧಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸುವವರೆಗೆ ರಾಜ್ಯ ಸಂಸ್ಥೆಗಳಿಗೆ ಹಣ ಬಿಡುಗಡೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಬಿಸಿಸಿಐ ಮನವಿ ಸಲ್ಲಿಸಿದ್ದು, ಪಂದ್ಯ ನಡೆಸುವುದಕ್ಕೆ ಹಣ ಬಿಡುಗಡೆ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದೆ. 
ಸುಪ್ರೀಂ ಕೋರ್ಟ್ ನ ನ್ಯಾ.ಅನಿಲ್ ಆರ್ ದಾವೆ ಹಾಗೂ ನ್ಯಾ. ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಎದುರು ಹಾಜರಾಗಿ ಹೇಳಿಕೆ ನೀಡಿರುವ ವಕೀಲ ಕಪಿಲ್ ಸಿಬಲ್ ಹಣ ಬಿಡುಗಡೆ ಮಾಡಲು ಅನುಮತಿ ನೀಡುವವರೆಗೂ ನ.9ರಂದು ರಾಜ್ ಕೋಟ್ ನಲ್ಲಿ ನಡೆಯಬೇಕಿರುವ ಭಾರತ- ಇಂಗ್ಲೆಂಡ್ ಪಂದ್ಯವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು ಎಂದು ಕಪಿಲ್ ಸಿಬಲ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT