ದಸರಾ ಗೆ ಚಾಲನೆ ನೀಡಿದ ಸಾಹಿತಿ ಚನ್ನವೀರ ಕಣವಿ 
ಕ್ರಿಕೆಟ್

ಕಾವೇರಿ ವಿವಾದಿಂದಾಗಿ ಕಳೆಗುಂದಿದ ವಿಶ್ವ ವಿಖ್ಯಾತ ಮೈಸೂರು ದಸರಾ

ತೀವ್ರ ಬಿಕ್ಕಟ್ಟಿಗೆ ಕಾರಣವಾಗಿರುವ ಕಾವೇರಿ ಸಮಸ್ಯೆ ವಿಶ್ವ ವಿಖ್ಯಾತ ಮೈಸೂರು ದಸರಾದ ಮೇಲೆ ಪರಿಣಾಮ...

ಮೈಸೂರು: ತೀವ್ರ ಬಿಕ್ಕಟ್ಟಿಗೆ ಕಾರಣವಾಗಿರುವ ಕಾವೇರಿ ಸಮಸ್ಯೆ ವಿಶ್ವ ವಿಖ್ಯಾತ ಮೈಸೂರು ದಸರಾದ ಮೇಲೆ ಪರಿಣಾಮ ಬೀರಿದೆ.

ಹೆಸರಾಂತ ಕವಿ ಚನ್ನವೀರ ಕಣವಿ ಚಾಮುಂಡಿ ಬೆಟ್ಟದಲ್ಲಿ ದಸರಾಗೆ ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಣವಿ ತಮ್ಮ ಉದ್ಘಾಟನಾ ಭಾಷಣದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದರು.

ಕನ್ನವೀರ ಕಣವಿ ಅವರ ಕುಟುಂಬವನ್ನು ಪೂರ್ಣಕುಂಭ ಮೇಳ, ಜಾನಪದ ನೃತ್ಯತಂಡದೊಂದಿಗೆ ಸ್ವಾಗತಿಸಲಾಯಿತು. ಹಸಿರು ದಸರಾ ಆಚರಣೆಗೆ ಕಣವಿ ಪ್ರಶಂಸಿದರು.

ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಲ್ಲಿ ಕಾವೇರಿ ವಿವಾದ ಸಂಬಂಧ ಸರ್ವ ಪಕ್ಷ ಸಭೆ ಹಿನ್ನೆಲೆಯಲ್ಲಿ ದಸರಾ ಹಬ್ಬದ ಸಂಭ್ರಮ ಕಾಣೆಯಾಗಿತ್ತು. ಸಿಎಂ ಸಿದ್ದರಾಮಯ್ಯ ಕಾವೇರಿ ವಿವಾದದ ಬಗ್ಗೆಯೇ ತಲೆ ಕೆಡಿಸಿಕೊಂಡಿದ್ದು ಎದ್ದು ಕಾಣುತ್ತಿತ್ತು.

ಕಾವೇರಿ ವಿಚಾರದಲ್ಲಿ ತಮಿಳುನಾಡು ಮಗ್ಗುಲು ಮುಳ್ಳಾಗಿ ಆಗಾಗ ಚುಚ್ಚುತ್ತಲೇ ಇರುತ್ತದೆ. ಸದ್ಯಕ್ಕೆ ಸಂಕಷ್ಟ ಸೂತ್ರ ರಚಿಸುವ ಮೂಲಕ ತುರ್ತು ಪರಿಹಾರ ಕಂಡುಕೊಳ್ಳಬೇಕು. ಕಾನೂನಿನ ಚೌಕಟ್ಟಿನಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಪರಿಹಾರ ರೂಪಿಸಬೇಕು. ನ್ಯಾಯಾಲಯ ಕೂಡ ಮಾನವೀಯ ದೃಷ್ಟಿಯಿಂದ ಪರಿಶೀಲಿಸುವ ಅಗತ್ಯವಿದೆ. ಜಲ ವಿವಾದಗಳಲ್ಲಿ ತಮ್ಮ ಪಕ್ಷದ ಹಿತಕ್ಕಿಂತ ರಾಜ್ಯದ ಹಿತ ಮುಖ್ಯ ಎಂಬುದನ್ನು ರಾಷ್ಟ್ರೀಯ ಪಕ್ಷಗಳು ಭಾವಿಸಬೇಕು’ ಎಂದು ಸಲಹೆ ನೀಡಿದ ಅವರು ಮೌಢ್ಯಾಚರಣೆ ನಿಷೇಧ ಕಾಯ್ದೆಯನ್ನು ಶೀಘ್ರವೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

SCROLL FOR NEXT