299 ರನ್ ಗೆ ನ್ಯೂಜಿಲ್ಯಾಂಡ್ ಆಲೌಟ್: 258 ರನ್ ಗಳ ಮುನ್ನಡಯೊಂದಿಗೆ ಭಾರತದ 2 ನೇ ಇನ್ನಿಂಗ್ಸ್ ಆರಂಭ 
ಕ್ರಿಕೆಟ್

299 ರನ್ ಗೆ ನ್ಯೂಜಿಲ್ಯಾಂಡ್ ಆಲೌಟ್: 258 ರನ್ ಗಳ ಮುನ್ನಡಯೊಂದಿಗೆ ಭಾರತದ 2 ನೇ ಇನ್ನಿಂಗ್ಸ್ ಆರಂಭ

ಭಾರತ- ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಮುನ್ನಡೆ ಭಾರತ ತಂಡ 258 ರನ್ ಗಳ ಮುನ್ನಡೆ ಸಾಧಿಸಿದೆ.

ಇಂದೋರ್: ಭಾರತ- ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಮುನ್ನಡೆ ಭಾರತ ತಂಡ 258 ರನ್ ಗಳ ಮುನ್ನಡೆ ಸಾಧಿಸಿದೆ.

ನ್ಯೂಲ್ಯಾಂಡ್ ತಂಡ 299 ರನ್ ಗಳಿಗೆ ಸರ್ವಪತನ ಕಂಡಿದ್ದು, ಭಾರತದ ಪರ ಅಶ್ವಿನ್ 6 ವಿಕೆಟ್ ಪಡೆದರೆ ರವೀಂದ್ರ ಜಡೇಜಾ 2 ವಿಕೆಟ್ ಪಡೆದಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಮುನ್ನಡೆ ಕಾಯ್ದುಕೊಳ್ಳುವುದರಲ್ಲಿ  ಪ್ರಮುಖ ಪಾತ್ರ ವಹಿಸಿದ ಆರ್ ಅಶ್ವಿನ್, ಎದುರಾಳಿ ತಂಡದ ಪ್ರಾರಂಭಿಕ ಆಟಗಾರ ಟಾಮ್ ಲ್ಯಾಥಮ್ ಅವರ ವಿಕೆಟ್ ಪಡೆದು ನ್ಯೂಜಿಲ್ಯಾಂಡ್ ತಂಡಕ್ಕೆ ಆರಂಭಿಕ ಆಘಾತ ನೀಡಿದರು.

ಊಟದ ವಿರಾಮಕ್ಕೂ ಮುನ್ನವೇ ನ್ಯೂಜಿಲ್ಯಾಂಡ್ ತಂಡದ ಮೂವರು ಬ್ಯಾಟ್ಸ್ ಮ್ಯಾನ್ ಗಳ ವಿಕೆಟ್ ಪಡೆದು ಭಾರತ ತಂಡ ಬೃಹತ್ ಮೊತ್ತದ ಮುನ್ನಡೆ ಸಾಧಿಸುವುದಕ್ಕೆ ನೆರವಾದರು. ಊಟದ ವಿರಾಮದ ವೇಳೆಗೆ 6 ವಿಕೆಟ್ ನಷ್ಟಕ್ಕೆ  216 ರನ್ ಗಳಿಸಿದ್ದ ನ್ಯೂಜಿಲ್ಯಾಂಡ್ ತಂಡ, ಟೀ ವಿರಾಮದ ನಂತರ ಸರ್ವಪತನ ಕಂಡಿತು. ಮೊದಲ ಇನ್ನಿಂಗ್ಸ್ ನಲ್ಲಿ ನ್ಯೂಜಿಲ್ಯಾಂಡ್ ನ ಮಾರ್ಟಿನ್ ಗುಪ್ಟಿಲ್ 72, ಜೇಮ್ಸ್ ನೀಶಾಮ್ 37 ರನ್ ಗಳಿಸಿದರು.

ಆರ್ ಅಶ್ವಿನ್ 65 ರನ್ ಗಳನ್ನು ನೀಡಿ 6 ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದರು. ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ  557 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಸೆಕೆಂಡ್ ಇನ್ನಿಂಗ್ಸ್'ನಲ್ಲಿ ಟೀಮ್ ಇಂಡಿಯಾ 18 ರನ್ ಗಳಿಸಿದೆ. ಮುರುಳಿ ವಿಜಯ್(11) ಮತ್ತು ಚೇತೆಶ್ವರ್ ಪೂಜರ್ (1) ವಿಕೆಟ್ ಕಾಯ್ದು ಕೊಂಡಿದ್ದಾರೆ. ಮುರುಳಿ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಗಂಭೀರ್ 6 ರನ್ ಗಳಿಸಿದ್ದ ಸಂದರ್ಭದಲ್ಲಿ ಗಾಯಗೊಂಡು ಪೆವೆಲಿಯನ್ ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT