ರಾಂಚಿ: ರಾಂಚಿಯಲ್ಲಿ ನಡೆಯುತ್ತಿರುವ 4ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ಭಾರತ ಗೆಲ್ಲಲು 261ರನ್ ಗಳ ಟಾರ್ಗೆಟ್ ನೀಡಿದೆ.
ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ಜಿಲ್ಲೆ ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 4ನೇ ಏಕದಿನ ಪಂದ್ಯದಲ್ಲಿ ಪ್ರಾರಂಭಿಕ ಪರಾಕ್ರಮ ಮೆರೆದ ಕಿವೀಸ್ ಆಟಗಾರರು ಇನಿಂಗ್ಸ್ ಅಂತ್ಯದಲ್ಲಿ ರನ್ಗಳಿಸಲು ಪರದಾಡಿದರು. ಪರಿಣಾಮ ಆರಂಭಿಕ್ ಬ್ಯಾಟ್ಸ್ ಮನ್ ಮಾರ್ಟಿನ್ ಗುಪ್ಟಿಲ್ (72) ಅವರ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ನ್ಯೂಜಿಲೆಂಡ್ ನಿಗದಿತ 50 ಓವರ್ಗೆ 7ವಿಕೆಟ್ ನಷ್ಟಕ್ಕೆ 260 ರನ್ ಗಳಿಸಿತು.
3ನೇ ಪಂದ್ಯದ ಸೋಲಿನ ಒತ್ತಡದಲ್ಲಿರುವ ವಿಲಿಯಮ್ಸನ್ ಪಡೆಗೆ ಸರಣಿ ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ. ಆದರೆ ಭಾರತ ತಂಡ ಈಗಾಗಲೇ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಈ ಪಂದ್ಯವನ್ನು ಗೆದ್ದರೆ ಸರಣಿಯನ್ನು ಕೈವಶ ಮಾಡಿಕೊಳ್ಳಲಿದೆ.
ಕಳೆದ ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಅಜೇಯ 154 ರನ್ ಸಿಡಿಸಿದ ಕೊಹ್ಲಿ ಮತ್ತು 80 ರನ್ ಸಿಡಿಸಿದ್ದ ಧೋನಿ ಕಿವೀಸ್ ಪಡೆಗೆ ಮಾರಕವಾಗುವ ಸಾಧ್ಯತೆ ಇದೆ.
ಧೋನಿಗೆ ರಾಂಚಿ ತವರು ಜಿಲ್ಲೆಯಾದ್ದರಿಂದ ತವರು ಅಭಿಮಾನಿಗಳ ಬೆಂಬಲವಿದೆ. ಹಾಗೆಯೇ ಕೊಹ್ಲಿ ರಾಂಚಿ ಪಿಚ್ ಅದೃಷ್ಟದ ಪಿಚ್ ಆಗಿದ್ದು, ಈ ಹಿಂದೆ ಇದೇ ಪಿಚ್ ನಲ್ಲಿ ಕೊಹ್ಲಿ ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಇಂಗ್ಲೆಂಡ್ ವಿರುದ್ಧ ಇದೇ ಕ್ರೀಡಾಂಗಣದಲ್ಲಿ ಅಜೇಯ 77 ರನ್ ಭಾರಿಸಿದ್ದ ಕೊಹ್ಲಿ, ಶ್ರೀಲಂಕಾ ವಿರುದ್ಧ ಚೇಸಿಂಗ್ 139 ರನ್ ಗಳಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos