ಸಂಗ್ರಹ ಚಿತ್ರ 
ಕ್ರಿಕೆಟ್

ವಿಶ್ವಕಪ್ ಗೆಲುವಿಗೆ 6 ವರ್ಷ; ಗೆಲುವಿನ ಕ್ಷಣಗಳ ಮೆಲುಕು ಹಾಕಿದ ಮಾಜಿ ಕ್ರಿಕೆಟಿಗರು!

ಭಾರತದ 28 ವರ್ಷಗಳ ಕನಸು ನನಸಾದ ಕ್ಷಣಕ್ಕೆ 6 ವರ್ಷ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಜಯಿಸಿದ ವಿಶ್ವಕಪ್ ಗೆಲುವಿಗೆ ಇಂದು 6 ವರ್ಷಗಳು ತುಂಬಿದ್ದು..

ನವದೆಹಲಿ: ಭಾರತದ 28 ವರ್ಷಗಳ ಕನಸು ನನಸಾದ ಕ್ಷಣಕ್ಕೆ 6 ವರ್ಷ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಜಯಿಸಿದ ವಿಶ್ವಕಪ್ ಗೆಲುವಿಗೆ ಇಂದು 6 ವರ್ಷಗಳು ತುಂಬಿದ್ದು, ಇದೇ ಖುಷಿಯಲ್ಲಿ ಮಾಜಿ ಕ್ರಿಕೆಟಿಗರು ಆ ಗೆಲುವಿನ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಎಂಎಸ್ ಧೋನಿ ನೇತೃತ್ವದ ತಂಡ ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಘಟಾನುಘಟಿ ತಂಡಗಳನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಏಪ್ರಿಲ್ 2 2011, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್  ಪಂದ್ಯದಲ್ಲಿ ಶ್ರೀಲಂಕಾ ತಂಡ ಎದುರಾಳಿಯಾಗಿತ್ತು. ಮೊದಲು ಬ್ಯಾಟಿಂಗ್ ನಡೆಸಿದ್ದ ಶ್ರೀಲಂಕಾ ತಂಡ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 274 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಮೊತ್ತವನ್ನು ಬೆನ್ನು ಹತ್ತಿದ ಎಂಎಸ್  ಧೋನಿ ನೇತೃತ್ವದ ಭಾರತ ತಂಡ 48.2 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಐತಿಹಾಸಿಕ ಗೆಲುವು ಸಾಧಿಸಿತ್ತು. ಗೌತಮ್ ಗಂಭೀರ್ (97 ರನ್ ) ಮತ್ತು ಅಂತಿಮ ಹಂತದಲ್ಲಿ ಗೆಲುವಿನ ರನ್ ಭಾರಿಸಿದ ನಾಯಕ ಎಂಎಸ್ ಧೋನಿ  (ಅಜೇಯ 91) ಹೋರಾಟದ ಫಲವಾಗಿ ಭಾರತಕ್ಕೆ 28 ವರ್ಷಗಳ ಬಳಿಕ ವಿಶ್ವಕಪ್ ಮುಡಿಗೇರಿತ್ತು.

ಈ ಅಭೂತಪೂರ್ವ ಕ್ಷಣಕ್ಕೆ ಇಂದು 6 ವರ್ಷ ತುಂಬಿದ್ದು, ಅಪೂರ್ವ ಕ್ಷಣಗಳನ್ನು ಮಾಜಿ ಕ್ರಿಕೆಟಿಗರು ಮೆಲುಕ ಹಾಕಿದ್ದು, ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಈ ಪೀಳಿಗೆಯ ಅತ್ಯುತ್ತಮ ನೆನಪು ಎಂದು ಟ್ವೀಟ್ ಮಾಡಿದ್ದಾರೆ.  ಅಂತೆಯೇ ಅಭೂತ ಪೂರ್ವ ಗೆಲುವು ಎಂದು ಮಹಮದ್ ಕೈಫ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT