ರಿಷಭ್ ಪಂತ್ 
ಕ್ರಿಕೆಟ್

ಅಪ್ಪನ ಸಾವಿನ ದುಃಖದಲ್ಲೂ ಡೆಲ್ಲಿ ಪರ ಆಡಿ ಅರ್ಧ ಶತಕ ಸಿಡಿಸಿದ ರಿಷಭ್ ಪಂತ್!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ತಂದೆ ಸಾವಿನ ದುಃಖದಲ್ಲೂ...

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ತಂದೆ ಸಾವಿನ ದುಃಖದಲ್ಲೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆಡಿದರು. 
ಬುಧವಾರ ರಾತ್ರಿ ರಿಷಭ್ ಪಂತ್ ತಂದೆ ರಾಜೇಂದ್ರ ಪಂತ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಗುರುವಾರ ಹರಿದ್ವಾರದಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳನ್ನು ಪೂರೈಸಿದ ರಿಷಭ್, ತಾಯಿ ಸರೋಜ್ ಮತ್ತು ಸಾಕ್ಷಿಗೆ ಸಾಂತ್ವಾನ ಹೇಳಿ ಶುಕ್ರವಾರ ಬೆಂಗಳೂರಿನಲ್ಲಿ ತಂಡವನ್ನು ಕೂಡಿಕೊಂಡಿದ್ದರು. 
ರಿಷಭ್ ಪಂತ್ ಡೆಲ್ಲಿ ಪರ ಆಡುವ ಮೂಲಕ ಕ್ರೀಡಾಬದ್ಧತೆ, ವೃತ್ತಿಪರತೆ ಪ್ರದರ್ಶಿಸಿ ಕ್ರಿಕೆಟ್ ಪ್ರೇಮಿಗಳ ಮನಗೆದ್ದರು. ಇನ್ನು ಈ ಹಿಂದೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ 1999ರ ವಿಶ್ವಕಪ್ ನಲ್ಲಿ ಕೀನ್ಯಾ ವಿರುದ್ಧ ಮತ್ತು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 2006ರ ರಣಜಿ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಆಡಿದ್ದರು. 
ನಿನ್ನೆ ನಡೆದ ಪಂದ್ಯದಲ್ಲಿ ಪಂತ್ ಉತ್ತಮವಾಗಿ ಆಡುವ ಮೂಲಕ ತಂಡವನ್ನು ಗೆಲುವಿನ ಮುಟ್ಟಿಸಲು ಶತ ಪ್ರಯತ್ನಪಟ್ಟರು. ಆದರೆ ಸಹ ಆಟಗಾರರು ಸಾಥ್ ನೀಡದೇ ಇದ್ದಿದ್ದರಿಂದ ಏಕಾಂಗಿಯಾಗಿ ಹೋರಾಟ ಮಾಡಿ 57 ರನ್ ಗಳಿಸಿದರು ತಂಡ ಸೋಲಿನಿಂದ ಪಾರಾಗಿಲ್ಲ. ಕೊನೆಗೆ ಬೆಂಗಳೂರು ತಂಡ 15 ರನ್ ಗಳಿಂದ ಜಯ ಗಳಿಸಿ ಗೆಲುವಿನ ನಗೆ ಬೀರಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT