ಮತ್ತೆ ಸೋತ ಆರ್ ಸಿಬಿ 
ಕ್ರಿಕೆಟ್

ಮತ್ತೆ ಸೋತ ಆರ್ ಸಿಬಿ; ಪುಣೆ ವಿರುದ್ಧ 29 ರನ್ ಗಳ ಹೀನಾಯ ಸೋಲು

ಸತತ 2 ಸೋಲುಗಳಿಂದ ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಾಲ್ಕನೇ ಪಂದ್ಯದಲ್ಲೂ ಮತ್ತೆ ಸೋಲು ಕಾಣುವ ಮೂಲಕ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

ಬೆಂಗಳೂರು: ಸತತ 2 ಸೋಲುಗಳಿಂದ ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ  ಐದನೇ ಪಂದ್ಯದಲ್ಲೂ ಮತ್ತೆ ಸೋಲು ಕಾಣುವ ಮೂಲಕ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಸೀಸನ್ 10 ರ 17ನೇ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಬೆಂಗಳೂರು ತಂಡ 29 ರನ್ ಗಳ ಹೀನಾಯ ಸೋಲು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪುಣೆ ತಂಡ ನಿಗದಿತ  20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಗಳನ್ನು ಕಲೆಹಾಕಿತು, ಆ ಮೂಲಕ ಬೆಂಗಳೂರು ತಂಡಕ್ಕೆ ಗೆಲ್ಲಲ್ಲು 162 ರನ್ ಗಳ ಸವಾಲಿನ ಗುರಿ ನೀಡಿತು.
ಪುಣೆ ನೀಡಿದ 162 ರನ್ ಗಳ ಗುರಿ ಬೆನ್ನು ಹತ್ತಿದೆ ಬೆಂಗಳೂರು ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ತಂಡದ ಮೊತ್ತ ಕೇವಲ 14ರನ್ ಗಳಾಗಿದ್ದಾಗ ಮನ್ ದೀಪ್ ಸಿಂಗ್ ಶೂನ್ಯಕ್ಕೆ ಠಾಕೂರ್ ಬೌಲಿಂಗ್ ನಲ್ಲಿ ಔಟ್ ಆದರು. ಏತನ್ಮಧ್ಯೆ 28 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ  ನಾಯಕ ವಿರಾಟ್ ಕೊಹ್ಲಿ ಕೂಡ ಸ್ಟೋಕ್ಸ್ ಬೌಲಿಂಗ್ ನಲ್ಲಿ ರಹಾನೆ ಕ್ಯಾಚಿತ್ತು ಹೊರ ನಡೆದರು. ಬಳಿಕ ಕ್ರೀಸ್ ಗೆ ಬಂದ ಸ್ಫೋಟಕ ಬ್ಯಾಟ್ಸಮನ್ ಎಬಿ ಡಿವಿಲಿಯರ್ಸ್ 29 ರನ್ ಗಳಿಸಿ ತಾಹಿರ್ ಬೌಲಿಂಗ್ ನಲ್ಲಿ ನಿರ್ಗಮಿಸಿದರು. ಬಳಿಕ ಜೊತೆಗೂಡಿದ ಜಾಧವ್ ಕೂಡ 10 ರನ್ ಗಳಿಸಿ  ಉನಾದ್ಕತ್ ಗೆ ಕ್ಲೀನ್ ಬೌಲ್ಡ್ ಆದರು. 14 ರನ್ ಗಳಿಸಿದ್ದ ನಾಟ್ಸನ್ ಸ್ಟೋಕ್ಸ್ ಬೌಲಿಂಗ್ ನಲ್ಲಿ ಔಟ್ ಆದರು.
ಬಳಿಕ ಬಿನ್ನಿ ಜೊತೆಗೂಡಿದ ನೇಗಿ ಉತ್ತಮವಾಗಿ ಆಡುವ ಮುನ್ಸೂಚನೆ ನೀಡಿದರಾದರೂ ಠಾಕೂರ್ ಬೌಲಿಂಗ್ ನಲ್ಲಿ ಕ್ಯಾಚಿತ್ತು ಹೊರ ನಡೆದರು. ಬಳಿಕ 18 ರನ್ ಗಳಿಸಿದ್ ಬಿನ್ನಿ ಕೂಡ ಠಾಕೂರ್ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆದರು. ಎಸ್ ಬದ್ರೀ ಉನಾದ್ಕತ್ ಬೌಲಿಂಗ್ ನಲ್ಲಿ ಔಟಾದರೆ,  ಮಿಲ್ನೆಸ್ಟೋಕ್ಸ್ ಬೌಲಿಂಗ್ ನಲ್ಲಿ ಔಟ್ ಆದರು.
ಅಂತಿಮವಾಗಿ ಬೆಂಗಳೂರು ತಂಡ ನಿಗದಿತ 20 ಓರ್ ಗಳಲ್ಲಿ ಆರ್ ಸಿಬಿ 9 ವಿಕೆಟ್ ನಷ್ಟಕ್ಕೆ 134 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 29 ರನ್ ಗಳ ಹೀನಾಯ ಸೋಲು ಕಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT