ಆರ್ ಸಿಬಿ 
ಕ್ರಿಕೆಟ್

ಪುಣೆ ವಿರುದ್ಧದ ಪಂದ್ಯದಿಂದ ಕ್ರಿಸ್ ಗೇಲ್ ಕೈಬಿಟ್ಟಿದ್ದಕ್ಕೆ ಆರ್ ಸಿಬಿ ಕೋಚ್ ವೆಟ್ಟೊರಿ ಸಮರ್ಥನೆ

ಪುಣೆ ವಿರುದ್ಧದ ಪಂದ್ಯದಿಂದ ಕ್ರಿಸ್ ಗೇಲ್ ನ್ನು ಕೈಬಿಟ್ಟಿದ್ದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಡ್ಯಾನಿಯಲ್ ವೆಟ್ಟೋರಿ ಸಮರ್ಥನೆ ನೀಡಿದ್ದಾರೆ.

ಬೆಂಗಳೂರು: ಪುಣೆ ವಿರುದ್ಧದ ಪಂದ್ಯದಿಂದ ಕ್ರಿಸ್ ಗೇಲ್ ನ್ನು ಕೈಬಿಟ್ಟಿದ್ದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಡ್ಯಾನಿಯಲ್ ವೆಟ್ಟೋರಿ ಸಮರ್ಥನೆ ನೀಡಿದ್ದಾರೆ. 
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ನಂತರ ತಂಡಕ್ಕೆ ಬೌಲರ್ ಗಳ ಕೊರತೆ ಕಾಡುತ್ತಿದೆ ಎಂದೆನಿಸಿತ್ತು. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ವಾಟ್ಸನ್ ಉತ್ತಮ ಆಟ ಆಡಬಲ್ಲವರಾಗಿದ್ದರಿಂದ, ಆಲ್ ರೌಂಡರ್ ಸಾಮರ್ಥ್ಯವನ್ನು ಗುರುತಿಸಿ ಅವರಿಗೆ ಅವಕಾಶ ನೀಡಲಾಯಿತು ಎಂದು ತಂಡದ ಕೋಚ್ ಡ್ಯಾನಿಯಲ್ ವೆಟ್ಟೋರಿ ಸಮರ್ಥನೆ ನೀಡಿದ್ದಾರೆ. 
ಆರ್ ಪಿಎಸ್ ವಿರುದ್ಧದ ಪಂದ್ಯದ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡ್ಯಾನಿಯಲ್ ವೆಟ್ಟೋರಿ, ಪಂದ್ಯದಲ್ಲಿ ವಾಟ್ಸನ್ ಬೌಲಿಂಗ್, ಬ್ಯಾಟಿಂಗ್ ಎರಡೂ ವಿಭಾಗದಲ್ಲಿಯೂ ವಿಫಲರಾದರು. ಬೌಲಿಂಗ್ ನಲ್ಲಿ 44 ರನ್ ನೀಡಿ ಬ್ಯಾಟಿಂಗ್ ನಲ್ಲಿ ಮಹತ್ವದ ಹಂತದಲ್ಲಿ ಕೇವಲ 14 ರನ್ ಗಳಿಸಿ ಬೆನ್ ಸ್ಟೋಕ್ಸ್ ಬೌಲಿಂಗ್ ಗೆ ಬಲಿಯಾದರು. "ನಾವು ಬೌಲಿಂಗ್ ನಲ್ಲಿ ಮೊದಲ 18 ಓವರ್ ಗಳಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದೆವು. ಆದರೆ ಕೊನೆಯ ಎರಡು ಓವರ್ ಗಳಲ್ಲಿ 30 ರನ್ ನೀಡಿದ್ದು ಪಂದ್ಯ ಕೈತಪ್ಪಲು ಕಾರಣವಾಯಿತು ಎಂದು ವೆಟ್ಟೋರಿ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!