ಕ್ರಿಕ್ ಇನ್ಫೋ ಚಿತ್ರ 
ಕ್ರಿಕೆಟ್

ಐಪಿಎಲ್ 2017: ಗುಜರಾತ್ ವಿರುದ್ಧ ಪಂಜಾಬ್ ಗೆ 26 ರನ್ ಗಳ ಭರ್ಜರಿ ಜಯ

ಐಪಿಎಲ್ ಟೂರ್ನಿ ನಿಮಿತ್ತ ರಾಜ್ ಕೋಟ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 26 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ರಾಜ್ ಕೋಟ್: ಐಪಿಎಲ್ ಟೂರ್ನಿ ನಿಮಿತ್ತ ರಾಜ್ ಕೋಟ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 26 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಪಂಜಾಬ್ ತಂಡದ ಸಂಘಟಿತ ಬೌಲಿಂಗ್ ಹಾಗೂ ತಂಡದ ನಿಧಾನಗತಿಯ ಬ್ಯಾಟಿಂಗ್ ನಿಂದಾಗಿ ಗುಜರಾತ್ ತಂಡ ಸೋಲು ಅನುಭವಿಸಿದೆ. ಪಂಜಾಬ್ ನೀಡಿದ್ದ 189 ರನ್ ಗಳ ಗುರಿ ಬೆನ್ನಟ್ಟಿದ ಗುಜರಾತ್ ತಂಡಕ್ಕೆ ಆರಂಭಿಕ  ಆಘಾತ ಎದುರಾಗಿತ್ತು. ಕೇವಲ 6 ರನ್ ಗಳಿಸಿ ತಂಡ ಸ್ಫೋಟಕ ಆಟಗಾರ ಮೆಕ್ಕಲಮ್ ಔಟ್ ಆಗಿದ್ದರು. ಬಳಿಕ ಫಿಂಚ್ ಕೂಡ 13 ರನ್ ಗಳಿಸಿ ನಿರ್ಗಮಿಸಿದರೆ, ಬಳಿಕ ಬಂದ ಸುರೇಶ್ ರೈನಾ ಪಂಜಾಬ್ ತಂಡಕ್ಕೆ ಕೊಂಚ ಪ್ರತಿರೋಧ  ಒಡ್ಡಿದರು. ಆದರೆ 32 ರನ್ ಗಳಿಸಿದ್ದ ರೈನಾ ಪಟೇಲ್ ಬೌಲಿಂಗ್ ನಲ್ಲಿ ಭಾರಿ ಹೊಡೆತಕ್ಕೆ ಕೈಹಾಕಿ ಮ್ಯಾಕ್ಸ್ ವೆಲ್ ಕ್ಯಾಚಿತ್ತು ಹೊರ ನಡೆದರು. ಬಳಿಕ ಕಾರ್ತಿಕ್ ಜೊತೆ ಗೂಡದ ರವೀಂದ್ರ ಜಡೇಜಾ 9 ರನ್ ಗಳಿಸಿ ಔಟ್ ಆದರು.

ಒಂದೆಡೆ ವಿಕೆಟ್ ಬೀಳುತ್ತಿದ್ದರು ಮತ್ತೊಂದು ತುದಿಯಲ್ಲಿ ಕ್ರೀಸ್ ನಲ್ಲಿ ಕಾರ್ತಿಕ್ ಗಟ್ಟಿಯಾಗಿ ನಿಂತು ಆಡುತ್ತಿದ್ದರು. ಜಡೇಜಾ ಬಳಿಕ ಬಂದ ಸ್ಮಿತ್ ಮತ್ತು ನಾಥ್ ಬಂದಷಅಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರೆ, ಟೈ 22 ರನ್  ಗಳಿಸಿ ನಿರ್ಗಮಿಸಿದರು. ಇದೇ ವೇಳೆ  ಕಾರ್ತಿಕ್ ಅರ್ಧಶತಕ ಸಿಡಿಸಿದರಾದರೂ ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಲಾಗಲಿಲ್ಲ. ಅಂತಿಮವಾಗಿ ಗುಜರಾತ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 162  ರನ್ ಗಳನ್ನಷ್ಟೇ ಗಳಿಸಲ ಶಕ್ತರಾದರು. ಆ ಮೂಲಕ 26 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡರು.

ಇನ್ನು ಪಂಜಾಬ್ ಪರ ಸಂಘಟಿತ ಬೌಲಿಂಗ್ ಪ್ರದರ್ಶನ ನೀಡಿದ ಸಂದೀಪ್ ಶರ್ಮಾ, ಕರಿಯಪ್ಪ, ಪಟೇಲ್ ಮತ್ತು ಸ್ಟಾಯಿನ್ಸ್ ತಲಾ 2 ವಿಕೆಟ್ ಪಡೆದರೆ, ಎಂ ಶರ್ಮಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT