ರಾಯಲ್ ಚಾಲೆಂಜರ್ಸ್ ಬೆಂಗಳೂರು 
ಕ್ರಿಕೆಟ್

ಮಳೆಯಿಂದಾಗಿ ಬೆಂಗಳೂರು ಪಂದ್ಯ ರದ್ದು: ಆರ್ಸಿಬಿ ಪ್ಲೇ-ಆಫ್ ಕನಸು ಕ್ಷೀಣ!

ಮಳೆಯಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ...

ಬೆಂಗಳೂರು: ಮಳೆಯಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ರದ್ದಾಗಿದ್ದು ಪರಿಣಾಮ ಐಪಿಎಲ್ ಪ್ಲೇ-ಆಫ್ ಗೆ ಎಂಟ್ರಿ ಕೊಡುವ ಆರ್ಸಿಬಿ ಕನಸು ಕ್ಷೀಣಗೊಂಡಿದೆ. 
ಸದ್ಯ ಟೂರ್ನಿಯಲ್ಲಿ 7 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಗೆದ್ದಿದ್ದ ಆರ್ಸಿಬಿ 4 ಅಂಕಗಳನ್ನು ಪಡೆದಿತ್ತು. 8ನೇ ಪಂದ್ಯ ಮಳೆಯಿಂದ ರದ್ದಾಗಿದ್ದು ಉಭಯ ತಂಡಗಳಿಗೆ ತಲಾ 1 ಅಂಕಗಳನ್ನು ನೀಡಲಾಗಿದೆ. ಇದರೊಂದಿಗೆ ಆರ್ಸಿಬಿ 5 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. 
ವಿರಾಟ್ ಕೊಹ್ಲಿ ಪಡೆ ಉಳಿದಿರುವ ಆರೂ ಪಂದ್ಯಗಳನ್ನು ಗೆದ್ದರೂ ಪ್ಲೇ-ಆಫ್ ಸ್ಥಾನಕ್ಕೇರುವುದು ಕಷ್ಟಸಾಧ್ಯ. ತಂಡದ ನೆಟ್ ರನ್ ರೇಟ್(-1.210) ತೀರಾ ಕಳಪೆಯಾಗಿದೆ. ಆರ್ಸಿಬಿಗೆ ಗುಜರಾತ್ ಲಯನ್ಸ್ ಪುಣೆ ಸೂಪರ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಪಂದ್ಯಗಳು ಬಾಕಿ ಇವೆ. ಇದರಲ್ಲಿ ಮೂರು ಪಂದ್ಯಗಳು ತವರಿನಲ್ಲಿ ನಡೆದರೆ ಇನ್ನುಳಿದ ಮೂರು ತವರಿನಾಚೆಯ ಪಂದ್ಯಗಳಾಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT