ರಾಬಿನ್ ಉತ್ತಪ್ಪ 
ಕ್ರಿಕೆಟ್

ರಾಬಿನ್ ಉತ್ತಪ್ಪ ಸೆಳೆಯಲು ಕೇರಳ ಕ್ರಿಕೆಟ್ ಸಂಸ್ಥೆ ಪ್ರಯತ್ನ!

ಕನ್ನಡಿಗ ರಾಬಿನ್ ಉತ್ತಪ್ಪ ಕರ್ನಾಟಕ ರಣಜಿ ತಂಡದ ಹಿರಿಯ ಬ್ಯಾಟ್ಸ್ ಮನ್. ಇಂತಹ ಆಟಗಾರನನ್ನು ತಮ್ಮ ತಂಡದ ಪರ ಆಡಲು ಕೇರಳ ಕ್ರಿಕೆಟ್ ಸಂಸ್ಥೆ ಸೆಳೆಯಲು ಪ್ರಯತ್ನ...

ಕನ್ನಡಿಗ ರಾಬಿನ್ ಉತ್ತಪ್ಪ ಕರ್ನಾಟಕ ರಣಜಿ ತಂಡದ ಹಿರಿಯ ಬ್ಯಾಟ್ಸ್ ಮನ್. ಇಂತಹ ಆಟಗಾರನನ್ನು ತಮ್ಮ ತಂಡದ ಪರ ಆಡಲು ಕೇರಳ ಕ್ರಿಕೆಟ್ ಸಂಸ್ಥೆ ಸೆಳೆಯಲು ಪ್ರಯತ್ನ ನಡೆಸಿದೆ. 
2017-18ರ ಸಾಲಿನ ರಣಜಿ ಟ್ರೋಫಿಗೆ ತಮ್ಮ ತಂಡದ ಪರ ಆಡಲು ಸೆಳೆಯಲು ಪ್ರಯತ್ನ ನಡೆಸಿದ್ದೇವೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ ಮಾಹಿತಿ ನೀಡಿದೆ. ಕಳೆದ ವರ್ಷವೇ ಉತ್ತಪ್ಪ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ಬಾರಿ ಮತ್ತೊಮ್ಮೆ ಅವರನ್ನು ನಮ್ಮ ತಂಡದ ಪರ ಆಡಲು ಕೇಳಿದ್ದೇವೆ ಎಂದು ಕ್ರಿಕೆಟ್ ಸಂಸ್ಥೆ ಹೇಳಿದೆ. 
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಕ್ರಿಕೆಟ್ ಸಂಸ್ಥೆ ವಕ್ತಾರ ವಿನಯ್ ಮೃತ್ಯಂಜಯ ಅವರು ಇದೆಲ್ಲಾ ಕೇವಲ ವದಂತಿ. ರಾಬಿನ್ ಕರ್ನಾಟಕ ತಂಡ ಬಿಟ್ಟು ಬೇರೆ ಯಾವ ತಂಡಕ್ಕೂ ಹೋಗುವುದಿಲ್ಲ ಎಂದು ಪತ್ರಿಕೆಯೊಂದಕ್ಕೆ ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT