ಗೌತಮ್ ಗಂಭೀರ್ 
ಕ್ರಿಕೆಟ್

'ಕಮ್ಯೂನಿಟಿ ಕಿಚನ್' ಕ್ಯಾಂಟಿನ್ ತೆರೆದ ಗೌತಮ್ ಗಂಭೀರ್, ಇಲ್ಲಿ ಎಲ್ಲವೂ ಉಚಿತ!

ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ಅವರು 'ಕಮ್ಯೂನಿಟಿ ಕಿಚನ್' ಕ್ಯಾಂಟಿನ್ ತೆರೆದು ಅದರಲ್ಲಿ ಬಡವರಿಗೆ ಉಚಿತ ಆಹಾರವನ್ನು ನೀಡುತ್ತಿದ್ದು ಬಡವರ ಹಸಿವನ್ನು ನೀಗಿಸಲು ಮುಂದಾಗಿದ್ದಾರೆ.

ನವದೆಹಲಿ: ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ಅವರು 'ಕಮ್ಯೂನಿಟಿ ಕಿಚನ್' ಕ್ಯಾಂಟಿನ್ ತೆರೆದು ಅದರಲ್ಲಿ ಬಡವರಿಗೆ ಉಚಿತ ಆಹಾರವನ್ನು ನೀಡುತ್ತಿದ್ದು ಬಡವರ ಹಸಿವನ್ನು ನೀಗಿಸಲು ಮುಂದಾಗಿದ್ದಾರೆ. 
ರಾಷ್ಟ್ರ ರಾಜಧಾನಿ ದೆಹಲಿಯ ಪಟೇಲ್ ನಗರದಲ್ಲಿ ಗಂಭೀರ್ ಕ್ಯಾಂಟಿನ್ ತೆರೆದಿದ್ದು ಇಲ್ಲಿ ಉಚಿತವಾಗಿ ಆಹಾರ ನೀಡಲಾಗುತ್ತದೆ. ತಮ್ಮ ಹುಟ್ಟೂರಿನ ಬಡ ಜನರ ಹಸಿವನ್ನು ನೀಗಿಸಲು ಗಂಭೀರ ಈ ಕ್ಯಾಂಟಿನ್ ಅನ್ನು ತೆರೆದಿದ್ದಾರೆ. 
ಗೌತಮ್ ಗಂಭೀರ್ ಫೌಂಡೆಷನ್ ವತಿಯಿಂದ ಜುಲೈ 31ರಿಂದ ಈ ಕ್ಯಾಂಟಿನ್ ಓಪನ್ ಮಾಡಲಾಗಿದ್ದು ದಿನಂ ಪ್ರತಿ ಬಡ ಜನರಿಗೆ ಉಚಿತ ಆಹಾರ ನೀಡಲಾಗುತ್ತಿದೆ. ಕ್ರಿಕೆಟ್ ಬದುಕಿನಲ್ಲಿ ತಾವು ದುಡಿದ ಹಣವನ್ನು ಬಡ ಜನರಿಗಾಗಿ ಖರ್ಚು ಮಾಡಲು ಗಂಭೀರ್ ತೀರ್ಮಾನಿಸಿದ್ದಾರೆ.
ಗಂಭೀರ್ ಅವರ ಈ ಕಾರ್ಯಕ್ಕೆ ದೇಶಾದ್ಯಂತ ಭಾರೀ ಮೆಚ್ಚುಗೆಗೆ ಕಾರಣವಾಗಿದೆ. ರಾಜಕೀಯ ಉದ್ದೇಶಕ್ಕಾಗಿ ಕರ್ನಾಟಕದಲ್ಲಿ ಕ್ಯಾಂಟಿನ್ ತೆರೆಯಲು ಮುಂದಾಗಿರುವ ಕಾಂಗ್ರೆಸ್ ಇಂದಿರಾ ಗಾಂಧಿ ಹೆಸರಿನಲ್ಲಿ ಕ್ಯಾಂಟಿನ್ ತೆರೆಯುತ್ತಿದೆ. ಇನ್ನು ಜೆಡಿಎಸ್ ಅಪ್ಪಾಜಿ ಕ್ಯಾಂಟಿನ್ ತೆರೆದಿದ್ದು ಇಲ್ಲಿ ಕಾಸಿಗೆ ಊಟ ನೀಡಲಾಗುತ್ತದೆ. ಆದರೆ ಯಾವುದೇ ದುರುದ್ದೇಶವಿಲ್ಲದೆ ಗಂಭೀರ್ ಮಾನವೀಯತೆಯ ಆಧಾರದ ಮೇಲೆ ಕ್ಯಾಂಟಿನ್ ತೆರೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT