ವಿರಾಟ್ ಕೊಹ್ಲಿ 
ಕ್ರಿಕೆಟ್

ಜಡೇಜಾ ಅಮಾನತು: ಐಸಿಸಿ ನಿಯಮಗಳಲ್ಲಿ ಸ್ಥಿರತೆ ಬೇಕು: ವಿರಾಟ್ ಕೊಹ್ಲಿ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸ್ಪಿನ್ನರ್ ರವೀಂದ್ರ ಜಡೇಜಾ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಒಂದು ಪಂದ್ಯದ...

ಕಾಂಡಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸ್ಪಿನ್ನರ್ ರವೀಂದ್ರ ಜಡೇಜಾ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಒಂದು ಪಂದ್ಯದ ಮೇಲೆ ನಿಷೇಧ ಹೇರಿದ್ದು ಈ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 
ಆಟಗಾರರ ಮೇಲಿ ಐಸಿಸಿ ನೀತಿ ಸಂಹಿತೆಯನ್ನು ಅನುಷ್ಠಾನಗೊಳಿಸುವಲ್ಲಿ ಮತ್ತಷ್ಟು ಸ್ಥಿರತೆ ತೋರಬೇಕಿದೆ. ಇನ್ನು ಆಟಗಾರರು ಸಹ ಐಸಿಸಿ ನಿಯಮವಳಿಗಳ ಕುರಿತು ಗಮನ ಹರಿಸಬೇಕಿದೆ. ಆದರೆ ಆಟಗಾರರ ಮೇಲೆ ಇಂತಹ ಪ್ರಮುಖ ನಿರ್ಣಯಗಳನ್ನು ಮಾಡುವ ಸಂದರ್ಭದಲ್ಲಿ ಆಡಳಿತ ಮಂಡಳಿಯು ಹೆಚ್ಚಿನ ಸ್ಥಿರತೆ ತೋರಿಸಬೇಕು ಎಂದು ವಿರಾಟ್ ಕೊಹ್ಲಿ ಆಗ್ರಹಿಸಿದ್ದಾರೆ. 
ಐಸಿಸಿ ನಿಯಮಗಳು ಸ್ಥಿರವಾದರೆ, ಮೈದಾನದಲ್ಲಿ ತಮ್ಮನ್ನು ತಾವು ಹೇಗೆ ನಡೆಸಬೇಕು ಎನ್ನುವುದರ ಬಗ್ಗೆ ಆಟಗಾರರು ಹೆಚ್ಚು ಸ್ಪಷ್ಟವಾಗಿ ತಿಳಿದಿದ್ದರೆ, ಇದು ಆಟವನ್ನು ಉತ್ತಮಗೊಳ್ಳಲು ಸಹಾಯ ಮಾಡುತ್ತದೆ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ. 
ಲಂಕಾ ವಿರುದ್ಧದ 2ನೇ ಟೆಸ್ಟ್ ನ 3ನೇ ದಿನದಾಟದ ವೇಳೆ 58ನೇ ಓವರ್ ಮಾಡಿದ್ದ ಜಡೇಜಾ ಐಸಿಸಿ ನಿಯಮ ಉಲ್ಲಂಘಿಸಿದ್ದರು. ಜಡೇಜಾ ಎಸೆದ ಚೆಂಡನ್ನು ಲಂಕಾದ ಆಟಗಾರ ದಿಮುತ್ ಕರುಣರತ್ನೆ ರಕ್ಷಣಾತ್ಮಕವಾಗಿ ಆಡಿ ಚೆಂಡನ್ನು ಜಡೇಜಾ ಕೈ ಸೇರುವಂತೆ ಹೊಡೆದಿದ್ದರು. ಕೂಡಲೇ ಜಡೇಜಾ ಚೆಂಡನ್ನು ಅವರತ್ತ ಥ್ರೋ ಮಾಡಿದರು. ಇದು ಬ್ಯಾಟ್ಸಮನ್ ಗೆ ತಗುಲಿಲ್ಲವಾದರೂ ಇದೊಂದು ಅಪಾಯಕಾರಿ ಥ್ರೋ ಆಗಿತ್ತು.
ಈ ಬಗ್ಗೆ ಸ್ವತಃ ಆನ್ ಫೀಲ್ಡ್ ಅಂಪೈರ್ ಜಡೇಜಾಗೆ ಎಚ್ಚರಿಕೆ ನೀಡಿದ್ದರು. ಆ ಕ್ಷಣಕ್ಕೆ ಜಡೇಜಾ ಕ್ಷಮೆ ಕೋರಿದ್ದರು. ಈ ಘಟನೆಯನ್ನು ಮ್ಯಾಚ್ ರೆಫರಿ ಐಸಿಸಿಗೆ ಮಾಹಿತಿ ನೀಡಿದ್ದರು. ಜಡೇಜಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಐಸಿಸಿ ಅವರಿಗೆ ಒಂದು ಪಂದ್ಯದ ನಿಷೇಧ ಹೇರಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT