ಅಕ್ಷರ್ ಪಟೇಲ್-ಜಸ್ ಪ್ರೀತ್ ಬುಮ್ರಾ 
ಕ್ರಿಕೆಟ್

2019ರ ವಿಶ್ವಕಪ್ ಅನ್ನು ಟೀಂ ಇಂಡಿಯಾ ಖಂಡಿತವಾಗಿಯೂ ಗೆಲ್ಲುತ್ತದೆ: ಅಕ್ಷರ್ ಪಟೇಲ್

ಇಂಗ್ಲೆಂಡ್ ನಲ್ಲಿ ನಡೆಯಲಿರುವ 2019ರ ವಿಶ್ವಕಪ್ ಅನ್ನು ಟೀಂ ಇಂಡಿಯಾ ಖಂಡಿತವಾಗಿಯೂ ಗೆಲ್ಲುತ್ತದೆ ಎಂದು ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಭವಿಷ್ಯ...

ಡಂಬುಲ್ಲಾ(ಶ್ರೀಲಂಕಾ): ಇಂಗ್ಲೆಂಡ್ ನಲ್ಲಿ ನಡೆಯಲಿರುವ 2019ರ ವಿಶ್ವಕಪ್ ಅನ್ನು ಟೀಂ ಇಂಡಿಯಾ ಖಂಡಿತವಾಗಿಯೂ ಗೆಲ್ಲುತ್ತದೆ ಎಂದು ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಭವಿಷ್ಯ ನುಡಿದಿದ್ದಾರೆ. 
ಸದ್ಯದ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಉತ್ತಮವಾಗಿ ಆಡುತ್ತಿದ್ದು ಬಲಿಷ್ಠ ತಂಡವಾಗಿದೆ. ಹೀಗಾಗಿ ಭಾರತ ಮುಂಬವರು ವಿಶ್ವಕಪ್ ಅನ್ನು ಗೆಲ್ಲುವ ಫೆವರೆಟ್ ತಂಡವಾಗಿದೆ ಎಂದು ಅಕ್ಷರ್ ಪಟೇಲ್ ಹೇಳಿದ್ದಾರೆ. 
ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸದ್ಯ ಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಇನ್ನು ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 9 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದೆ ಎಂದರು. 
ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಮತ್ತು ಅಕ್ಷರ್ ಪಟೇಲ್ ನಡುವಿನ ಸಂದರ್ಶನದಲ್ಲಿ ಅಕ್ಷರ್ ಪಟೇಲ್, ಪ್ರಸ್ತುತ ಭಾರತ ಕ್ರಿಕೆಟ್ ತಂಡ ಯಾವುದೇ ಒಬ್ಬ ವ್ಯಕ್ತಿಯ ಮೇಲೆ ಅವಲಂಬಿತವಾಗಿಲ್ಲ ಎಂಬುದು ಈ ತಂಡದ ಮಹತ್ವದ ಅಂಶವಾಗಿದೆ. ಇನ್ನು ಎಲ್ಲಾ ಆಟಗಾರರು ಉತ್ತಮವಾಗಿ ಆಡುತ್ತಿದ್ದು ಮುಂದಿನ ಪಂದ್ಯಗಳಲ್ಲೂ ಇದೇ ರೀತಿಯ ಆಟವನ್ನು ಮುಂದುವರೆಸಲಾಗುವುದು ಎಂದರು. 
 ಸದ್ಯ ತಂಡದಲ್ಲಿ ಯುವ ಆಟಗಾರರ ದಂಡೆ ಇದೆ. 26-27ರ ಆಸುಪಾಸಿನ ವಯಸ್ಸಿನವರಾಗಿದ್ದು ಪ್ರತಿಯೊಬ್ಬರ ಸಾಧನೆಯನ್ನು ಸಂಭ್ರಮಿಸುತ್ತೇವೆ. ಈಗಿರುವಾಗ 2019ರ ವಿಶ್ವಕಪ್ ಅನ್ನು ಖಂಡಿತವಾಗಿಯೂ ನಾವೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. 
ಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡಿದ್ದ ಅಕ್ಷರ್ ಪಟೇಲ್ ತಮ್ಮ ಸ್ಪಿನ್ ದಾಳಿಯಿಂದ ಲಂಕಾ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದ್ದರು. 34 ರನ್ ಗಳಿಗೆ 3 ವಿಕೆಟ್ ಪಡೆಯುವ ಮೂಲಕ ತಮ್ಮ ವೃತ್ತಿ ಬದುಕಿನ ಶ್ರೇಷ್ಠ ಸಾಧನೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT