ಉಪುಲ್ ತರಂಗ 
ಕ್ರಿಕೆಟ್

ಶ್ರೀಲಂಕಾದ ನಾಯಕ ಉಪುಲ್ ತರಂಗಗೆ 2 ಪಂದ್ಯಗಳಿ ನಿಷೇಧ ವಿಧಿಸಿದ ಐಸಿಸಿ

ಶ್ರೀಲಂಕಾ ತಂಡದ ನಾಯಕ ಉಪುಲ್ ತರಂಗ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ನಿಧಾನ ಗತಿಯ ಓವರ್ ರೇಟ್ ನೀಡಿದ್ದಕ್ಕಾಗಿ ಎರಡು ಏಕದಿನ ಪಂದ್ಯಗಳ ನಿಷೇಧಕ್ಕೆ ಒಳಗಾಗಿದ್ದಾರೆ.

ಪಲ್ಲೇಕಲೆ: ಶ್ರೀಲಂಕಾ ತಂಡದ ನಾಯಕ ಉಪುಲ್ ತರಂಗ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ನಿಧಾನ ಗತಿಯ ಓವರ್ ರೇಟ್ ನೀಡಿದ್ದಕ್ಕಾಗಿ ಎರಡು ಏಕದಿನ ಪಂದ್ಯಗಳ ನಿಷೇಧಕ್ಕೆ ಒಳಗಾಗಿದ್ದಾರೆ.
ಪಂದ್ಯವನ್ನು 47 ಓವರುಗಳಿಗೆ ತಗ್ಗಿಸಿದರೂ ಶ್ರೀಲಂಕಾವು ನಿಧಾನ ಗತಿಯ ಓವರ್ ರೇಟ್ ನೀಡಿದ್ದು ನಾಯಕ ತರಂಗ ಪಾಲಿಗೆ ಮುಳುವಾಗಿದೆ. ಶ್ರೀಲಂಕಾ ಏಕದಿನ ತಂಡದ ನಾಯಕ ಉಪುಲ್ ತರಂಗ ಮೇಲೆ ನಿಧಾನ ಗತಿಯ ಓವರ್‌ ರೇಟ್‌ ಗಾಗಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎರಡು ಪಂದ್ಯಗಳ ನಿಷೇಧ ಹೇರಿದೆ. ಐದು ಪಂದ್ಯಗಳ ಸರಣಿಯಲ್ಲಿ ಭಾರತವು 2-0 ಮುನ್ನಡೆ ಸಾಧಿಸಿದೆ.
ಈ ಸಮಯದಲ್ಲಿ ಭಾರತ ವಿರುದ್ಧದ ಎರಡು ಪಂದ್ಯಗಳಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಚಮರ ಕಪುಗೇದರ ಮುನ್ನಡೆಸಲಿದ್ದಾರೆ ಎನ್ನಲಾಗಿದೆ. ಭಾರತದ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಲಂಕಾ ಸರಣಿ ಗೆಲ್ಲಲು  ಮುಂದಿನ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಬೇಕಾದ ಒತ್ತಡಕ್ಕೆ ಸಿಲುಕಿದೆ.
ಈ ನಡುವೆ ಲಂಕಾದ ಆರಂಭಿಕ ಆಟಗಾರ ಧುನುಷ್ಕಾ ಗುಣತಿಲಕ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರನಡೆದಿದ್ದಾರೆ. ಭಾರತ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಗಾಯಕ್ಕೊಳಗಾಗಿರುವ ಗುಣತಿಲಕ ಅವರಿಗೆ 10 ದಿನಗಳ ವಿಶ್ರಾಂತಿ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT