ಪಲ್ಲೇಕಲೆ: ಶ್ರೀಲಂಕಾ ತಂಡದ ನಾಯಕ ಉಪುಲ್ ತರಂಗ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ನಿಧಾನ ಗತಿಯ ಓವರ್ ರೇಟ್ ನೀಡಿದ್ದಕ್ಕಾಗಿ ಎರಡು ಏಕದಿನ ಪಂದ್ಯಗಳ ನಿಷೇಧಕ್ಕೆ ಒಳಗಾಗಿದ್ದಾರೆ.
ಪಂದ್ಯವನ್ನು 47 ಓವರುಗಳಿಗೆ ತಗ್ಗಿಸಿದರೂ ಶ್ರೀಲಂಕಾವು ನಿಧಾನ ಗತಿಯ ಓವರ್ ರೇಟ್ ನೀಡಿದ್ದು ನಾಯಕ ತರಂಗ ಪಾಲಿಗೆ ಮುಳುವಾಗಿದೆ. ಶ್ರೀಲಂಕಾ ಏಕದಿನ ತಂಡದ ನಾಯಕ ಉಪುಲ್ ತರಂಗ ಮೇಲೆ ನಿಧಾನ ಗತಿಯ ಓವರ್ ರೇಟ್ ಗಾಗಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎರಡು ಪಂದ್ಯಗಳ ನಿಷೇಧ ಹೇರಿದೆ. ಐದು ಪಂದ್ಯಗಳ ಸರಣಿಯಲ್ಲಿ ಭಾರತವು 2-0 ಮುನ್ನಡೆ ಸಾಧಿಸಿದೆ.
ಈ ಸಮಯದಲ್ಲಿ ಭಾರತ ವಿರುದ್ಧದ ಎರಡು ಪಂದ್ಯಗಳಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಚಮರ ಕಪುಗೇದರ ಮುನ್ನಡೆಸಲಿದ್ದಾರೆ ಎನ್ನಲಾಗಿದೆ. ಭಾರತದ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಲಂಕಾ ಸರಣಿ ಗೆಲ್ಲಲು ಮುಂದಿನ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಬೇಕಾದ ಒತ್ತಡಕ್ಕೆ ಸಿಲುಕಿದೆ.
ಈ ನಡುವೆ ಲಂಕಾದ ಆರಂಭಿಕ ಆಟಗಾರ ಧುನುಷ್ಕಾ ಗುಣತಿಲಕ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರನಡೆದಿದ್ದಾರೆ. ಭಾರತ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಗಾಯಕ್ಕೊಳಗಾಗಿರುವ ಗುಣತಿಲಕ ಅವರಿಗೆ 10 ದಿನಗಳ ವಿಶ್ರಾಂತಿ ಸೂಚಿಸಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos