ಸಂಭ್ರಮದಲ್ಲಿ ಟೀಂ ಇಂಡಿಯಾ 
ಕ್ರಿಕೆಟ್

3ನೇ ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾಗೆ ಸರಣಿ ಜಯ

3ನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ವಿರುದ್ಧ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಪಳ್ಳೆಕಿಲೆ: 3ನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ವಿರುದ್ಧ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಶ್ರೀಲಂಕಾ ನೀಡಿದ 218 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ 45.1 ಓವರ್ ನಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು 218 ರನ್ ಗಳಿಸಿ ಗುರಿ ಸಾಧಿಸಿ ಸತತ ಮೂರನೇ ಜಯಸಾಧಿಸಿತು. ಆ ಮೂಲಕ 5 ಪಂದ್ಯಗಳ ಸರಣಿಯನ್ನು ಕೊಹ್ಲಿ ಪಡೆ ಇನ್ನೂ 2 ಪಂದ್ಯ ಭಾಕಿ ಇರುವಂತೆಯೇ ತನ್ನದಾಗಿಸಿಕೊಂಡಿತು. ಭಾರತದ ಪರ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅಜೇಯ 124 ರನ್ ಗಳನ್ನು ಸಿಡಿಸುವ ಮೂಲಕ ಗೆಲುವಿನ ರೂವಾರಿಯಾದರು, ರೋಹಿತ್ ಶರ್ಮಾ ಒಟ್ಟು 145 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 16 ಬೌಂಡರಿಗಳ ಸಹಾಯದಿಂದ ಒಟ್ಟು 124 ರನ್ ಸಿಡಿಸಿದ್ದರು. ರೋಹಿತ್ ಗೆ ಅತ್ಯುತ್ತಮ ಸಾಥ್ ನೀಡಿದ ಮಹೇಂದ್ರ ಸಿಂಗ್ ಧೋನಿ ಅಜೇಯ 67 ರನ್ ಸಿಡಿಸಿದರು. ಧೋನಿ ಒಟ್ಟು 86 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿಗಳ ಸಹಾಯದಿಂದ ಅರ್ಧಶತಕ ಸಡಿಸಿದ್ದರು.

ಅಂತಿಮವಾಗಿ ಭಾರತ 45.1 ಓವರ್ ನಲ್ಲಿ 218 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಶ್ರೀಲಂಕಾ ಪರ ಅಕಿಲ ಧನಂಜಯ 2 ವಿಕೆಟ್ ಕಬಳಿಸಿ ಉತ್ತಮ ಸ್ಪೆಲ್ ಮಾಡಿದರು. ಅಂತೆಯೇ ಲಸಿತ್ ಮಾಲಿಂಗ ಹಾಗೂ ಫರ್ನಾಂಡೋ ತಲಾ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT