ಅಂಗಳದಿಂದ ಹೊರ ನಡೆಯುತ್ತಿರುವ ಆಟಗಾರರು 
ಕ್ರಿಕೆಟ್

ಕ್ರೀಡಾಸ್ಫೂರ್ತಿ ಮರೆತು ಕ್ರಿಕೆಟಿಗರಿಗೆ ಅಪಮಾನ ಮಾಡಿದ ಶ್ರೀಲಂಕಾ ಪ್ರೇಕ್ಷಕರು!

ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯ ಶ್ರೀಲಂಕಾ ಪ್ರೇಕ್ಷಕರ ಆಕ್ರೋಶಕ್ಕೆ ಕಾರಣವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿತ್ತು.

ಪಳ್ಳೆಕಿಲೆ: ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯ ಶ್ರೀಲಂಕಾ ಪ್ರೇಕ್ಷಕರ ಆಕ್ರೋಶಕ್ಕೆ ಕಾರಣವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿತ್ತು.
ಪಂದ್ಯದ 44ನೇ ಓವರ್ ನಲ್ಲಿ ಸಿರಿವರ್ಧನ ಬೌಲಿಂಗ್ ನಲ್ಲಿ ರೋಹಿತ್ ಶರ್ಮಾ 1 ಬೌಂಡರಿ ಹಾಗೂ ಧೋನಿ ಒಂದು ಭರ್ಜರಿ ಸಿಕ್ಸರ್ ಭಾರಿಸುವುದರೊಂದಿಗೆ ಭಾರತ ಗೆಲುವು ಖಚಿತವಾಗಿತ್ತು. ಈ ಹಂತದಲ್ಲಿ ಅಂದರೆ 45ನೇ ಓವರ್ ಆರಂಭಕ್ಕೂ ಮೊದಲೇ ಪ್ರೇಕ್ಷಕರ ಅಂಗಳದಲ್ಲಿದ್ದ  ಶ್ರೀಲಂಕಾ ಅಭಿಮಾನಿಗಳು ಲಂಕಾ ತಂಡ ಹಾಗೂ ಲಂಕಾ ಕ್ರಿಕೆಟಿಗರ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು. ಒಂದು ಹಂತದಲ್ಲಿಯಂತೂ ಪ್ರೇಕ್ಷಕರು ಮೈದಾನದಲ್ಲಿದ್ದ ಆಟಗಾರರತ್ತ ಬಾಟಲಿಗಳನ್ನೂ ತೂರುವ ಮೂಲಕ ಲಂಕಾ ಕ್ರಿಕೆಟಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೀಗಾಗಿ ಅಂಪೈರ್ ಗಳು ಕೆಲಕಾಲ ಆಟವನ್ನು ಸ್ಥಗಿತಗೊಳಿಸಿದ್ದರು. ಅಲ್ಲದೆ ಪ್ರೇಕ್ಷಕರ ಗ್ಯಾಲರಿಯನ್ನು ಸಮಾಧಾನ ಪಡಿಸುವಂತೆ ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಿದರು. ಭದ್ರತಾ ಸಿಬ್ಬಂದಿಗಳು ಮೈದಾನದ ಸುತ್ತಾ ಪರೇಡ್ ನಡೆಸಿ ಪ್ರೇಕ್ಷಕರನ್ನು ಸಮಾಧಾನಗೊಳಿಸುವ ಪ್ರಯತ್ನ  ಮಾಡಿದರು. ಆದರೆ ಅಷ್ಟು ಹೊತ್ತಿಗಾಗಲೇ ಮೈದಾನದಿಂದ ಬಹುತೇಕ ಪ್ರೇಕ್ಷಕರು ಹೊರಟು ಹೋಗಿದ್ದರು. ಬಳಿಕ ಮೈದಾನದಲ್ಲಿದ್ದ ಬಾಟಲಿಗಳನ್ನು ಸಿಬ್ಬಂದಿಗಳು ತೆರವುಗೊಳಿಸಿದ ಬಳಿಕ ಆಟ ಮತ್ತೆ ಆರಂಭವಾಯಿತು.
ತಮ್ಮ ತಂಡದ ಸೋಲನ್ನು ಅರಗಿಸಿಕೊಳ್ಳಲಾಗದ ಲಂಕಾ ಅಭಿಮಾನಿಗಳು ಈ ರೀತಿ ನಡೆದುಕೊಂಡಿದ್ದು ಮಾತ್ರ ನಿಜಕ್ಕೂ ದುರದೃಷ್ಟಕರ. ಕ್ರಿಕೆಟ್ ನಲ್ಲಿ ಈ ಹಿಂದೆ ಸಾಕಷ್ಟು ಭಾರಿ ಇಂತಹ ಘಟನೆಗಳು ಸಂಭವಿಸಿವೆ. ಭಾರತದ ಪ್ರೇಕ್ಷಕರೂ ಕೂಡ ಭಾರತ ಸೋತಾಗ ಇಂತಹ ವರ್ತನೆ  ತೋರಿದ್ದಾರೆ. ಆದರೆ ಸೋಲುತ್ತಿರುವ ತಂಡಕ್ಕೆ ಬೆಂಬಲ ನೀಡಿ ಸ್ಪೂರ್ತಿಯಾಗಬೇಕಾದ ಅಭಿಮಾನಿಗಳೇ ಈ ರೀತಿ ನಡೆದುಕೊಂಡರೆ ಹೇಗೆ ಎಂಬ ಭಾವನೆ ಕ್ರೀಡಾ ಪ್ರೇಮಿಗಳನ್ನು ಕಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT