ಅಂಗಳದಿಂದ ಹೊರ ನಡೆಯುತ್ತಿರುವ ಆಟಗಾರರು 
ಕ್ರಿಕೆಟ್

ಕ್ರೀಡಾಸ್ಫೂರ್ತಿ ಮರೆತು ಕ್ರಿಕೆಟಿಗರಿಗೆ ಅಪಮಾನ ಮಾಡಿದ ಶ್ರೀಲಂಕಾ ಪ್ರೇಕ್ಷಕರು!

ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯ ಶ್ರೀಲಂಕಾ ಪ್ರೇಕ್ಷಕರ ಆಕ್ರೋಶಕ್ಕೆ ಕಾರಣವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿತ್ತು.

ಪಳ್ಳೆಕಿಲೆ: ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯ ಶ್ರೀಲಂಕಾ ಪ್ರೇಕ್ಷಕರ ಆಕ್ರೋಶಕ್ಕೆ ಕಾರಣವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿತ್ತು.
ಪಂದ್ಯದ 44ನೇ ಓವರ್ ನಲ್ಲಿ ಸಿರಿವರ್ಧನ ಬೌಲಿಂಗ್ ನಲ್ಲಿ ರೋಹಿತ್ ಶರ್ಮಾ 1 ಬೌಂಡರಿ ಹಾಗೂ ಧೋನಿ ಒಂದು ಭರ್ಜರಿ ಸಿಕ್ಸರ್ ಭಾರಿಸುವುದರೊಂದಿಗೆ ಭಾರತ ಗೆಲುವು ಖಚಿತವಾಗಿತ್ತು. ಈ ಹಂತದಲ್ಲಿ ಅಂದರೆ 45ನೇ ಓವರ್ ಆರಂಭಕ್ಕೂ ಮೊದಲೇ ಪ್ರೇಕ್ಷಕರ ಅಂಗಳದಲ್ಲಿದ್ದ  ಶ್ರೀಲಂಕಾ ಅಭಿಮಾನಿಗಳು ಲಂಕಾ ತಂಡ ಹಾಗೂ ಲಂಕಾ ಕ್ರಿಕೆಟಿಗರ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು. ಒಂದು ಹಂತದಲ್ಲಿಯಂತೂ ಪ್ರೇಕ್ಷಕರು ಮೈದಾನದಲ್ಲಿದ್ದ ಆಟಗಾರರತ್ತ ಬಾಟಲಿಗಳನ್ನೂ ತೂರುವ ಮೂಲಕ ಲಂಕಾ ಕ್ರಿಕೆಟಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೀಗಾಗಿ ಅಂಪೈರ್ ಗಳು ಕೆಲಕಾಲ ಆಟವನ್ನು ಸ್ಥಗಿತಗೊಳಿಸಿದ್ದರು. ಅಲ್ಲದೆ ಪ್ರೇಕ್ಷಕರ ಗ್ಯಾಲರಿಯನ್ನು ಸಮಾಧಾನ ಪಡಿಸುವಂತೆ ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಿದರು. ಭದ್ರತಾ ಸಿಬ್ಬಂದಿಗಳು ಮೈದಾನದ ಸುತ್ತಾ ಪರೇಡ್ ನಡೆಸಿ ಪ್ರೇಕ್ಷಕರನ್ನು ಸಮಾಧಾನಗೊಳಿಸುವ ಪ್ರಯತ್ನ  ಮಾಡಿದರು. ಆದರೆ ಅಷ್ಟು ಹೊತ್ತಿಗಾಗಲೇ ಮೈದಾನದಿಂದ ಬಹುತೇಕ ಪ್ರೇಕ್ಷಕರು ಹೊರಟು ಹೋಗಿದ್ದರು. ಬಳಿಕ ಮೈದಾನದಲ್ಲಿದ್ದ ಬಾಟಲಿಗಳನ್ನು ಸಿಬ್ಬಂದಿಗಳು ತೆರವುಗೊಳಿಸಿದ ಬಳಿಕ ಆಟ ಮತ್ತೆ ಆರಂಭವಾಯಿತು.
ತಮ್ಮ ತಂಡದ ಸೋಲನ್ನು ಅರಗಿಸಿಕೊಳ್ಳಲಾಗದ ಲಂಕಾ ಅಭಿಮಾನಿಗಳು ಈ ರೀತಿ ನಡೆದುಕೊಂಡಿದ್ದು ಮಾತ್ರ ನಿಜಕ್ಕೂ ದುರದೃಷ್ಟಕರ. ಕ್ರಿಕೆಟ್ ನಲ್ಲಿ ಈ ಹಿಂದೆ ಸಾಕಷ್ಟು ಭಾರಿ ಇಂತಹ ಘಟನೆಗಳು ಸಂಭವಿಸಿವೆ. ಭಾರತದ ಪ್ರೇಕ್ಷಕರೂ ಕೂಡ ಭಾರತ ಸೋತಾಗ ಇಂತಹ ವರ್ತನೆ  ತೋರಿದ್ದಾರೆ. ಆದರೆ ಸೋಲುತ್ತಿರುವ ತಂಡಕ್ಕೆ ಬೆಂಬಲ ನೀಡಿ ಸ್ಪೂರ್ತಿಯಾಗಬೇಕಾದ ಅಭಿಮಾನಿಗಳೇ ಈ ರೀತಿ ನಡೆದುಕೊಂಡರೆ ಹೇಗೆ ಎಂಬ ಭಾವನೆ ಕ್ರೀಡಾ ಪ್ರೇಮಿಗಳನ್ನು ಕಾಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT