ಎಂಎಸ್ ಧೋನಿ, ವೀರೇಂದ್ರ ಸೆಹ್ವಾಗ್ 
ಕ್ರಿಕೆಟ್

2019ರ ವಿಶ್ವಕಪ್‌ವರೆಗೂ ಧೋನಿ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲ: ಸೆಹ್ವಾಗ್

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರ ಸ್ಥಾನವನ್ನು ತುಂಬಬಲ್ಲ...

ನವದೆಹಲಿ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರ ಸ್ಥಾನವನ್ನು ತುಂಬಬಲ್ಲ ಆಟಗಾರ ಸದ್ಯಕ್ಕೆ ಯಾರೂ ಇಲ್ಲ. ಆದ್ದರಿಂದ 2019ರವರೆಗೂ ತಂಡದಲ್ಲಿ ಧೋನಿ ಸ್ಥಾನ ಸುಭದ್ರ ಎಂದು ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. 
ಸುದ್ದಿ ಸಂಸ್ಥೆಯೊಂದರ ಸಂದರ್ಶನದ ವೇಳೆ ಮಾತನಾಡಿದ ವೀರೇಂದ್ರ ಸೆಹ್ವಾಗ್, ರಿಷಭ್ ಪಂತ್ ಕೂಡ ವಿಕೆಟ್ ಕೀಪರ್ ಆಗಿದ್ದು ಬ್ಯಾಟಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಧೋನಿ ಸ್ಥಾನವನ್ನು ತುಂಬುವಂಥ ಸಾಮರ್ಥ್ಯ ತೋರಲು ಅವರಿಗೆ ಇನ್ನೂ ಸಾಕಷ್ಟು ಸಮಯ ಬೇಕು. ಆದ್ದರಿಂದ 2019ರ ವಿಶ್ವಕಪ್ ನಂತರವಷ್ಟೇ ಈ ಕುರಿತು ಚಿಂತನೆ ನಡೆಸಬಹುದು ಎಂದು ಹೇಳಿದ್ದಾರೆ. 
ಎಲ್ಲಾ ಪಂದ್ಯಗಳಲ್ಲೂ ಧೋನಿ ರನ್ ಗಳಿಸುತ್ತಾರೆಯೋ ಇಲ್ಲವೋ ಎಂಬುದರ ಬಗ್ಗೆ ಚಿಂತಿಸಬೇಕಾದ ಅಗತ್ಯವಿಲ್ಲ. ಮುಂದಿನ ವಿಶ್ವಕಪ್ ವರೆಗೂ ಆಡಲು ಸಮರ್ಥರಾಗಿರಲಿ ಎಂದು ನಾವೆಲ್ಲರೂ ಪ್ರಾರ್ಥಿಸಬೇಕಾದ ಅಗತ್ಯವಿದೆ. ಮಧ್ಯಮ ಮತ್ತು ಕೆಳ ಮಧ್ಯಮ ಕ್ರಮಾಂಕದಲ್ಲಿ ಅವರು ಹೊಂದಿರುವ ಅನುಭವ ಅಪಾರ ಎಂದು ಸೆಹ್ವಾಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT