ಕ್ರಿಕೆಟ್

3ನೇ ಟೆಸ್ಟ್ ಪಂದ್ಯ: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ

Srinivasamurthy VN
ನವದೆಹಲಿ: ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ  ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಇಂದಿನಿಂದ ಆರಂಭವಾಗಿರುವ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದ್ದು, 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇದು ಕೊನೆಯ ಪಂದ್ಯವಾಗಿದೆ. ಹೀಗಾಗಿ ಈಗಾಗಲೇ ಸರಣಿಯಲ್ಲಿ 1-0 ಅಂತರದಲ್ಲಿ ಭಾರತ ಮುಂದಿದ್ದು, ಈ  ಸರಣಿಯಲ್ಲಿ ಸಮಬಲ ಸಾಧಿಸಲು ಶ್ರೀಲಂಕಾ ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿ ಇದ್ದರೆ, ಭಾರತ ತಂಡ ಈ ಪಂದ್ಯದ ಗೆಲುವಿನ ಮೂಲಕ ಅಥವಾ ಡ್ರಾಮಾಡಿಕೊಳ್ಳುವ ಮೂಲಕ ಸರಣಿಯನ್ನು ಕೈ ವಶ ಮಾಡಿಕೊಳ್ಳಲು  ಬಯಸಿದೆ.
ಇನ್ನು ಭಾರತದ ವಿರುದ್ಧದ ಏಕದಿನ ಮತ್ತು ಟ್ವೆಂಟಿ 20 ಸರಣಿಗೆ ನಾಯಕತ್ವ ಬದಲಿಸಿರುವುದರಿಂದ ಈ ಪಂದ್ಯದಲ್ಲಿ ತಮ್ಮ ನಾಯಕತ್ವದ ಸಾಮರ್ಥ್ಯವನ್ನು ತೋರಿಸಬೇಕಾದ ಅನಿವಾರ್ಯ ಸ್ಥಿತಿ ಶ್ರೀಲಂಕಾ ತಂಡದ ನಾಯಕ ಚಾಂಡಿಮಲ್ ಅವರಿಗೆ ಒದಗಿದೆ. ಹೀಗಾಗಿ ಈ ಪಂದ್ಯದಲ್ಲಿ ಶತಾಗತಯಾ ಜಯ ಸಾಧಿಸಲೇ ಬೇಕು ಎಂದು ಲಂಕಾ ತಂಡ ಹೋರಾಡುವ ಸಾಧ್ಯತೆ ಇದೆ.
ಇನ್ನು 2ನೇ ಪಂದ್ಯದ ಗೆಲುವಿನ ಮೂಲಕ ಭಾರತ ಆತ್ಮವಿಶ್ವಾಸದ ಅಲೆಯಲ್ಲಿದೆ. ಈ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸರಣಿ ಭಾರತದ ಪಾಲಾಗಲಿದೆ. ಇದು ಸಾಧ್ಯವಾದರೆ ತಂಡ ನಿರಂತರ ಒಂಬತ್ತು ಟೆಸ್ಟ್ ಸರಣಿಗಳಲ್ಲಿ ಜಯದ ದಾಖಲೆಯನ್ನು ಸರಿಗಟ್ಟಲಿದೆ. ಆಸ್ಟ್ರೇಲಿಯಾದ ಹೆಸರಿನಲ್ಲಿ ಈಗ ಈ ದಾಖಲೆ ಇದೆ.
SCROLL FOR NEXT