ವಿವಿಎಸ್ ಲಕ್ಷ್ಮಣ್-ರಸ್ಸೆಲ್ ಅರ್ನಾಲ್ಡ್ 
ಕ್ರಿಕೆಟ್

ಭಾರತ ಲಂಕಾ ವಿರುದ್ಧ ಮತ್ತೊಂದು ವೈಟ್‌ವಾಶ್‌ ಗೆಲುವು ಸಾಧಿಸುವುದಿಲ್ಲ: ಅರ್ನಾಲ್ಡ್‌ ಕಾಲೆಳೆದ ಲಕ್ಷ್ಮಣ್

ಸದ್ಯ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ಗೆಲುವಿನ ನಾಗಲೋಟಕ್ಕೆ ತಡೆಯೊಡ್ಡುವವರು ಯಾರು ಇಲ್ಲದಂತಾಗಿದೆ. ಅಂತಹ ಟೀಂ ಇಂಡಿಯಾ ಮುಂಬರುವ ಲಂಕಾ...

ನವದೆಹಲಿ: ಸದ್ಯ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ಗೆಲುವಿನ ನಾಗಲೋಟಕ್ಕೆ ತಡೆಯೊಡ್ಡುವವರು ಯಾರು ಇಲ್ಲದಂತಾಗಿದೆ. ಅಂತಹ ಟೀಂ ಇಂಡಿಯಾ ಮುಂಬರುವ ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವೈಟ್‌ವಾಶ್‌ ಗೆಲುವು ಸಾಧಿಸುವುದಿಲ್ಲ ಎಂದು ಲಂಕಾದ ಮಾಜಿ ಕ್ರಿಕೆಟಿಗ ರಸ್ಸೆಲ್ ಅರ್ನಾಲ್ಡ್ ಭವಿಷ್ಯಕ್ಕೆ ಟೀಂ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಣಣ್ ತಿರುಗೇಟು ನೀಡಿದ್ದಾರೆ. 
ಈ ಹಿಂದೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ ಟೆಸ್ಟ್, ಏಕದಿನ ಮತ್ತು ಟಿ20 ಸರಣಿ ಸೇರಿದಂತೆ ಒಟ್ಟಾರೆ ಒಂಬತ್ತು ಪಂದ್ಯಗಳಲ್ಲೂ ಗೆಲುವು ಸಾಧಿಸುವ ಮೂಲಕ ಮೂರು ಮಾದರಿಯಲ್ಲೂ ಭಾರತ ಲಂಕಾ ತಂಡವನ್ನು ವೈಟ್ ವಾಶ್ ಮಾಡಿತ್ತು. ಇದೇ ವಿಚಾರವಾಗಿ ಅರ್ನಾಲ್ಡ್ ಟ್ವೀಟ್ ಮಾಡಿದ್ದು ಟೆಸ್ಟ್ ಸರಣಿಯಲ್ಲಿ ಲಂಕಾ ಭಾರತಕ್ಕೆ ವೈಟ್ ವಾಶ್ ಮಾಡುವ ಅವಕಾಶ ನೀಡಲಿಲ್ಲ. ಅದೇ ರೀತಿ ಮುಂಬರುವ 5 ಪಂದ್ಯಗಳ ಏಕದಿನ ಸರಣಿಯಲ್ಲೂ ಭಾರತಕ್ಕೆ ಲಂಕಾ ತಂಡ ವೈಟ್ ವಾಶ್ ಮಾಡಲು ಬಿಡುವುದಿಲ್ಲ ಎಂದು ಟ್ವೀಟಿಸಿದ್ದರು. 
ಇದಕ್ಕೆ ಪ್ರತಿಕ್ರಿಯಿಸಿರುವ ವಿವಿಎಸ್ ಲಕ್ಷ್ಮಣ್ ರಸ್ಸೆಲ್ ನಿಮ್ಮ ಭವಿಷ್ಯ ಸುಳ್ಳಾಗಲಿದೆ. ಭಾರತ ಮತ್ತು ಲಂಕಾ ನಡುವಿನ ಏಕದಿನ ಸರಣಿ 3 ಪಂದ್ಯಗಳಿಂದ ಕೂಡಿದ್ದು ನಿಮ್ಮ ಭವಿಷ್ಯ ಸುಳ್ಳಾಗಲಿದೆ ಎಂದು ಟ್ವೀಟಿಸಿದ್ದಾರೆ.
ಡಿಸೆಂಬರ್ 10 ರಿಂದ ಭಾರತ ಮತ್ತು ಲಂಕಾ ನಡುವಿನ ಏಕದಿನ ಸರಣಿ ಪ್ರಾರಂಭವಾಗಲಿದೆ. ನಂತರ ಡಿಸೆಂಬರ್ 20ರಿಂದ ಟಿ20 ಸರಣಿ ಪ್ರಾರಂಭವಾಗಿದೆ. ಸದ್ಯ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1 ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT