ವಿಕೆಟ್ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ 
ಕ್ರಿಕೆಟ್

ಮೊದಲ ಟಿ20 ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ 93 ರನ್ ಗಳ ಭರ್ಜರಿ ಜಯ

ಶ್ರೀಲಂಕಾ ವಿರುದ್ಧ ಕಟಕ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 93 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಕಟಕ್: ಶ್ರೀಲಂಕಾ ವಿರುದ್ಧ ಕಟಕ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 93 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಲ್ಲಿ ಶ್ರೀಲಂಕಾ ವಿರುದ್ಧ ಪಾರಮ್ಯ ಮೆರೆದ ಟೀಂ ಇಂಡಿಯಾ ಅರ್ಹವಾಗಿಯೇ ಪಂದ್ಯ ಜಯಿಸಿತು. ಭಾರತ ನೀಡಿದ 181 ರನ್ ಗಳ ಗುರಿ ಬೆನ್ನು ಹತ್ತಿದ ಶ್ರೀಲಂಕಾ ಕೇವಲ 16 ಓವರ್ ಗಳಲ್ಲಿ 87 ರನ್ ಗಳಿಸಿ ಆಲ್ ಔಟ್ ಆಯಿತು. ಶ್ರೀಲಂಕಾ ಪರ  ಆರಂಭಿಕ ಆಟಗಾರ ತರಂಗಾ ಗಳಿಸಿದ 23 ರನ್ ಗಳೇ ಆ ತಂಡದ ಆಟಗಾರನ ವೈಯುಕ್ತಿಕ ಗರಿಷ್ಠ ರನ್ ಗಳಿಕೆಯಾಗಿತ್ತು.
ಇನ್ನು ಲಂಕಾ ದಾಂಡಿಗರ ವಿರುದ್ಧ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬೌಲರ್ ಗಳು ನಿಗದಿತವಾಗಿ ವಿಕೆಟ್ ಪಡೆಯುವ ಮೂಲಕ ಲಂಕಾ ಪತನಕ್ಕೆ ಕಾರಣರಾದರು. ಪ್ರಮುಖವಾಗಿ ಚಾಹಲ್ ಮತ್ತು ಪಾಂಡ್ಯಾ ದಾಳಿ ಉತ್ತಮವಾಗಿತ್ತು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ನಡೆಸಿದ್ದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತ್ತು. ಭಾರತದ ಪರ ಆರಂಭಿಕ ಆಟಗಾರ ಕೆಎಲ್ ರಾಹುಲ್ ಕೇವಲ 48 ಎಸೆತಗಳಲ್ಲಿ 7 ಬೌಂಡರಿ ಒಂದು ಸಿಕ್ಸರ್ ನೆರವಿನಿಂದ 61 ರನ್ ಕಲೆ ಹಾಕಿದ್ದರು.  ಅಂತಿಮ ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಮನೀಷ್ ಪಾಂಡೆ (32 ರನ್, 18 ಎಸೆತ) ಹಾಗೂ ಎಂಎಸ್ ಧೋನಿ (39 ರನ್, 22 ಎಸೆತ) ಭಾರತದ ರನ್ ಗಳಿಕೆಯನ್ನು 180ರ ಗಡಿ ದಾಟಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT