ರೋಹಿತ್ ಶರ್ಮಾ 
ಕ್ರಿಕೆಟ್

ನಾನು ಮತ್ತೆ ಯಾವಾಗ ಭಾರತ ತಂಡದ ನಾಯಕನಾಗುತ್ತೇನೊ ಗೊತ್ತಿಲ್ಲ: ರೋಹಿತ್ ಶರ್ಮಾ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ನಾನು ಮತ್ತೆ ಯಾವಾಗ ಭಾರತ ತಂಡದ ನಾಯಕನಾಗುತ್ತೇನೊ ಗೊತ್ತಿಲ್ಲ ಎಂದು...

ಇಂದೋರ್: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ನಾನು ಮತ್ತೆ ಯಾವಾಗ ಭಾರತ ತಂಡದ ನಾಯಕನಾಗುತ್ತೇನೊ ಗೊತ್ತಿಲ್ಲ ಎಂದು ನೋವಿನಿಂದ ಹೇಳಿಕೊಂಡಿದ್ದಾರೆ. 
ಪ್ರವಾಸಿ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ನಾಳೆ ನಡೆಯಲಿದ್ದು ನಾಳಿನ ಪಂದ್ಯ ರೋಹಿತ್ ಶರ್ಮಾರ ನಾಯಕತ್ವದ ಕೊನೆಯ ಪಂದ್ಯವಾಗಿದೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಈ ರೀತಿ ಹೇಳಿದ್ದಾರೆ. 
ನಾನು ಇದೇ ಮೊದಲ ಬಾರಿಗೆ ತಂಡವನ್ನು ಮುನ್ನಡೆಸುತ್ತಿದ್ದೇನೆ. ಮುಂಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುವ ಒತ್ತಡವಿದೆ ಹಾಗೂ ಇದೇ ನನ್ನ ಕೊನೆಯ ನಾಯಕತ್ವದ ಪಂದ್ಯ ಸಹ ಇದಾಗಲಿದ್ದು ಮೈದಾನದಲ್ಲಿ ನಾನು ಕಳೆಯುವ ಪ್ರತಿಯೊಂದು ನಿಮಿಷವೂ ನನಗೆ ಹೆಚ್ಚು ಮಹತ್ವದ್ದು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. 
ಐಪಿಎಲ್ ನ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರಬಹದು. ಆದರೆ ಶತಕೋಟಿ ಭಾರತೀಯರು ಹೆಚ್ಚು ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ರಾಷ್ಟ್ರೀಯ ತಂಡವನ್ನು ನಿಭಾಯಿಸುವುದು ಎಷ್ಟು ಕಷ್ಟ ಎಂಬುದು ನನಗೆ ಮನವರಿಕೆಯಾಗದೆ ಎಂದರು. 
ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಳ್ಳುತ್ತಿದ್ದು ಆಫ್ರಿಕಾ ವಿರುದ್ಧದ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT