ರೋಹಿತ್ ಶರ್ಮಾ 
ಕ್ರಿಕೆಟ್

ನಾನು ಮತ್ತೆ ಯಾವಾಗ ಭಾರತ ತಂಡದ ನಾಯಕನಾಗುತ್ತೇನೊ ಗೊತ್ತಿಲ್ಲ: ರೋಹಿತ್ ಶರ್ಮಾ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ನಾನು ಮತ್ತೆ ಯಾವಾಗ ಭಾರತ ತಂಡದ ನಾಯಕನಾಗುತ್ತೇನೊ ಗೊತ್ತಿಲ್ಲ ಎಂದು...

ಇಂದೋರ್: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ನಾನು ಮತ್ತೆ ಯಾವಾಗ ಭಾರತ ತಂಡದ ನಾಯಕನಾಗುತ್ತೇನೊ ಗೊತ್ತಿಲ್ಲ ಎಂದು ನೋವಿನಿಂದ ಹೇಳಿಕೊಂಡಿದ್ದಾರೆ. 
ಪ್ರವಾಸಿ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ನಾಳೆ ನಡೆಯಲಿದ್ದು ನಾಳಿನ ಪಂದ್ಯ ರೋಹಿತ್ ಶರ್ಮಾರ ನಾಯಕತ್ವದ ಕೊನೆಯ ಪಂದ್ಯವಾಗಿದೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಈ ರೀತಿ ಹೇಳಿದ್ದಾರೆ. 
ನಾನು ಇದೇ ಮೊದಲ ಬಾರಿಗೆ ತಂಡವನ್ನು ಮುನ್ನಡೆಸುತ್ತಿದ್ದೇನೆ. ಮುಂಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುವ ಒತ್ತಡವಿದೆ ಹಾಗೂ ಇದೇ ನನ್ನ ಕೊನೆಯ ನಾಯಕತ್ವದ ಪಂದ್ಯ ಸಹ ಇದಾಗಲಿದ್ದು ಮೈದಾನದಲ್ಲಿ ನಾನು ಕಳೆಯುವ ಪ್ರತಿಯೊಂದು ನಿಮಿಷವೂ ನನಗೆ ಹೆಚ್ಚು ಮಹತ್ವದ್ದು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. 
ಐಪಿಎಲ್ ನ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರಬಹದು. ಆದರೆ ಶತಕೋಟಿ ಭಾರತೀಯರು ಹೆಚ್ಚು ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ರಾಷ್ಟ್ರೀಯ ತಂಡವನ್ನು ನಿಭಾಯಿಸುವುದು ಎಷ್ಟು ಕಷ್ಟ ಎಂಬುದು ನನಗೆ ಮನವರಿಕೆಯಾಗದೆ ಎಂದರು. 
ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಳ್ಳುತ್ತಿದ್ದು ಆಫ್ರಿಕಾ ವಿರುದ್ಧದ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT