ಕ್ರಿಕೆಟ್

ಬಿಸಿಸಿಐ ಅವ್ಯವಸ್ಥೆ ಲಾಭ ಪಡೆಯುತ್ತಿರುವ ಇತರ ರಾಷ್ಟ್ರಗಳ ಕ್ರಿಕೆಟ್ ಮಂಡಳಿಗೆ ರವಿಶಾಸ್ತ್ರಿ ಎಚ್ಚರಿಕೆ

Vishwanath S
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅವ್ಯವಸ್ಥೆಯ ಲಾಭ ಮಾಡಿಕೊಳ್ಳುತ್ತಿರುವ ವಿಶ್ವದ ಇತರ ಕ್ರಿಕೆಟ್ ಮಂಡಳಿಗಳಿಗೆ ಟೀಂ ಇಂಡಿಯಾದ ಮಾಜಿ ನಾಯಕ ರವಿಶಾಸ್ತ್ರಿ ಎಚ್ಚರಿಕೆ ನೀಡಿದ್ದಾರೆ. 
ಬಿಸಿಸಿಐ ಪರಿಸ್ಥಿತಿ ಹೀಗೆ ಇರುವುದಿಲ್ಲ. ಮಂಡಳಿ ಶೀಘ್ರದಲ್ಲೇ ಹಿಂದಿನ ಸ್ಥಿತಿಗೆ ಮರಳಲಿದೆ. ಹೀಗಾಗಿ ಬಿಸಿಸಿಐನ ಪರಿಸ್ಥಿತಿಯ ಲಾಭವನ್ನು ಪಡೆಯುವ ಪ್ರಯತ್ನವನ್ನು ಮಾಡಬೇಡಿ ಎಂದು ಹೇಳಿದ್ದಾರೆ. 
ಸದ್ಯ ಇಂಗ್ಲೆಂಡ್, ನ್ಯೂಜಿಲೆಂಡ್ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾದ ಕ್ರಿಕೆಟ್ ಮಂಡಳಿಗಳು ಬಿಸಿಸಿಐನ ಅವ್ಯವಸ್ಥೆಯ ಲಾಭ ಪಡೆದುಕೊಳ್ಳುತ್ತಿರುವ ರಾಷ್ಟ್ರಗಳಾಗಿವೆ. 
ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಲೋಧಾ ಸಮಿತಿಯ ಶಿಫಾರಸುಗಳನ್ನು ಬಿಸಿಸಿಐ ಅನುಷ್ಠಾನಕ್ಕೆ ತಂದಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ಬಿಸಿಸಿಐ ಅವ್ಯವಸ್ಥೆಯ ಕೂಡಾಗಿದೆ. 
SCROLL FOR NEXT