ಎಂ.ಎಸ್.ಕೆ ಪ್ರಸಾದ್- ಎಂ.ಎಸ್.ಧೋನಿ 
ಕ್ರಿಕೆಟ್

ನಾಯಕ ಸ್ಥಾನ ತ್ಯಜಿಸುವಂತೆ ಧೋನಿಗೆ ಬಿಸಿಸಿಐ ಒತ್ತಡ ಹೇರಲಿಲ್ಲ: ಎಂಎಸ್ ಕೆ ಪ್ರಸಾದ್

ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ನಾಯಕತ್ವ ತ್ಯಜಿಸುವಂತೆ...

ನವದೆಹಲಿ: ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ನಾಯಕತ್ವ ತ್ಯಜಿಸುವಂತೆ ಮಹೇಂದ್ರಸಿಂಗ್ ಧೋನಿ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಒತ್ತಡ ಹೇರಲಿಲ್ಲ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಶನಿವಾರ ಸ್ಪಷ್ಟಪಡಿಸಿದ್ದಾರೆ.
ನಾಯಕ ಸ್ಥಾನ ತ್ಯಜಿಸುವ ಬಗ್ಗೆ ಮಹೇಂದ್ರ ಸಿಂಗ್ ಧೋನಿಯವರೇ ನಿರ್ಧಾರ ತೆಗೆದುಕೊಂಡಿದ್ದು, ಅವರ ಮೇಲೆ ಬಿಸಿಸಿಐ ಯಾವುದೇ ಹೇರಲಿಲ್ಲ ಎಂದು ಪ್ರಸಾದ್ ಹೇಳಿದ್ದಾರೆ.
ತಂಡವನ್ನು ಮುನ್ನಡೆಸಲು ವಿರಾಟ್ ಕೊಹ್ಲಿಯೇ ಅರ್ಹ ವ್ಯಕ್ತಿ. ಹಾಗಾಗಿ ನಾಯಕ ಸ್ಥಾನ ತ್ಯಜಿಸುವಂತೆ ಬಿಸಿಸಿಐ ಧೋನಿಗೆ ಒತ್ತಡ ಹೇರಿತ್ತು ಎಂಬ ವರದಿಗಳ ಹಿನ್ನೆಲೆಯಲ್ಲಿ  ಪ್ರಸಾದ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಕ್ರಿಕೆಟ್‍ನೆಕ್ಸ್ಟ್  ಜತೆ ಮಾತನಾಡಿದ ಪ್ರಸಾದ್, 9 ವರ್ಷಗಳ ಕಾಲ ನಾಯಕ ಸ್ಥಾನ ನಿರ್ವಹಿಸಿ, ಅದನ್ನು ತ್ಯಜಿಸುವ ನಿರ್ಧಾರ ಧೋನಿಯ ವೈಯಕ್ತಿಕ ನಿರ್ಧಾರವಾಗಿತ್ತು ಎಂದಿದ್ದಾರೆ. ಅಲ್ಲದೆ ನಾಗ್ಪುರದಲ್ಲಿ ಜಾರ್ಖಂಡ್ ಮತ್ತು ಗುಜರಾತ್ ನಡುವಿನ ರಣಜಿ ಟ್ರೋಫಿ  ಸೆಮಿಫೈನಲ್ ಪಂದ್ಯದ ವೇಳೆ ದೋನಿ ಈ ನಿರ್ಧಾರವನ್ನು ನನಗೆ ಹೇಳಿದ್ದರು ಎಂದು ಪ್ರಸಾದ್. ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT