ನವದೆಹಲಿ: ವಿರಾಟ್ ಕೋಹ್ಲಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ತಮ್ಮ ನೇತೃತ್ವದಲ್ಲಿ ಗೆದ್ದ ಪಂದ್ಯಗಳಿಗಿಂತ ಹೆಚ್ಚು ಪಂದ್ಯಗಳನ್ನು ಗೆಲ್ಲಲಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜ.13 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಹೇಂದ್ರ ಸಿಂಗ್ ಧೋನಿ, ಎಲ್ಲಾ ಫಾರ್ಮೆಟ್ ಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಭಾರತ ತಂಡಕ್ಕೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾರತ ಕ್ರಿಕೆಟ್ ತಂಡ ಮುಂಬರುವ ದಿನಗಳಲ್ಲಿ ವಿಶೇಷವಾದ ಪ್ರದರ್ಶನ ನೀಡಲಿದೆ ಎಂದು ಧೋನಿ ಹೇಳಿದ್ದಾರೆ.