ಸಂಗ್ರಹ ಚಿತ್ರ 
ಕ್ರಿಕೆಟ್

ಪಾಕಿಸ್ತಾನದಲ್ಲಿ ಟಿ-20 ಸರಣಿಯ ಪಿಸಿಬಿ ಪ್ರಸ್ತಾಪ ತಿರಸ್ಕರಿಸಿದ ವಿಂಡೀಸ್ ಕ್ರಿಕೆಟ್ ಮಂಡಳಿ

ಪಾಕಿಸ್ತಾನದಲ್ಲಿ ಟಿ20 ಕ್ರಿಕೆಟ್ ಸರಣಿಯನ್ನಾಡುವ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆಯ ಪ್ರಸ್ತಾಪವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ತಿರಸ್ಕರಿಸಿದೆ.

ಬಾರ್ಬೊಡಸ್: ಪಾಕಿಸ್ತಾನದಲ್ಲಿ ಟಿ20 ಕ್ರಿಕೆಟ್ ಸರಣಿಯನ್ನಾಡುವ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆಯ ಪ್ರಸ್ತಾಪವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ತಿರಸ್ಕರಿಸಿದೆ.

2009ರಲ್ಲಿ ಲಾಹೋರ್ ನಲ್ಲಿ ನಡೆದ ಶ್ರೀಲಂಕಾ ಕ್ರಿಕೆಟ್ ಆಟಗಾರರ ಮೇಲಿನ ಉಗ್ರ ದಾಳಿ ಬಳಿಕ ಈ ವರೆಗೂ ಪಾಕಿಸ್ತಾನದಲ್ಲಿ ಒಂದೇ ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಾಗಿಲ್ಲ. ಕಳೆದ 5 ವರ್ಷಗಳಿಂದ ತವರಿನಲ್ಲಿ ಕ್ರಿಕೆಟ್  ಸರಣಿ ಆಯೋಜನೆಗೆ ಪಿಸಿಬಿ ಸತತ ಪ್ರಯತ್ನ ನಡೆಸುತ್ತಿದ್ದರೂ ವಿವಿಧ ದೇಶಗಳಿಂದ ಇದಕ್ಕೆ ಪೂರಕ ಪ್ರತಿಕ್ರಿಯೆ ಬಂದಿಲ್ಲ. ಇದಕ್ಕೆ ವೆಸ್ಟ್ ಇಂಡೀಸ್ ಮತ್ತೊಂದು ಸೇರ್ಪಡೆಯಾಗಿದ್ದು, ಈ ಹಿಂದೆ ಪಾಕಿಸ್ತಾನದಲ್ಲಿ ಟಿ20  ಸರಣಿಯನ್ನಾಡುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪ್ರಸ್ತಾಪವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಭದ್ರತೆಯ ಕಾರಣವೊಡ್ಡಿ ತಿರಸ್ಕರಿಸಿದೆ.

ಒಂದು ತಿಂಗಳ ಹಿಂದೆಯೇ ಪಿಸಿಬಿ ಈ ಪ್ರಸ್ತಾವನೆ ಸಲ್ಲಿಕೆ ಮಾಡಿತ್ತಾದರೂ, ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಎಫ್ ಐಸಿಎ ( Federation of International Cricketers Associations) ಮೊರೆ ಹೋಗಿತ್ತು.  ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡುವ ಕುರಿತು ವರದಿ ನೀಡಿರುವ ಎಫ್ ಐಸಿಎ ಸಂಸ್ಥೆ ಪಾಕಿಸ್ತಾನದಲ್ಲಿ ಆಟಗಾರರ ಭದ್ರತೆ ಕುರಿತು ಶಂಕೆ ವ್ಯಕ್ತಪಡಿಸಿದ್ದು, ಆಟಗಾರರ ಭದ್ರತೆ ಕುರಿತಂತೆ ಏನೂ ಹೇಳಲೂ ಸಾಧ್ಯವಿಲ್ಲ ಎಂದು ಹೇಳಿದೆ. ತನ್ನ  ಈ ವರದಿಯನ್ನು ವೆಸ್ಟ್ ಇಂಡೀಸ್ ನ ವೆಸ್ಟ್ ಇಂಡೀಸ್ ಪ್ಲೇಯರ್ಸ್ ಅಸೋಷಿಯನ್ ಗೆ ರವಾನಿಸಿದ್ದು, ಡಬಲ್ಯೂ ಐಪಿಎ ವಿಂಡೀಸ್ ಕ್ರಿಕೆಟ್ ಮಂಡಳಿಗೆ ವರದಿಯನ್ನು ರವಾನಿಸಿದೆ.

ಹೀಗಾಗಿ ಪಾಕಿಸ್ತಾನದಲ್ಲಿ ವೆಸ್ಚ್ ಇಂಡೀಸ್ ತಂಡ ಟಿ20 ಸರಣಿಯಲ್ಲಿ ಪರಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ವಿಂಡೀಸ್ ಕ್ರಿಕೆಟ್ ಮಂಡಳಿ ಪಿಸಿಬಿ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!