ಎಂಎಸ್ ಧೋನಿ 
ಕ್ರಿಕೆಟ್

ನಾಯಕತ್ವಕ್ಕೆ ಎಂಎಸ್ ಧೋನಿ ನಿವೃತ್ತಿ ಹಿಂದಿನ ಅಸಲಿ ಕಾರಣ!

ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕತ್ವಕ್ಕೆ ದಿಢೀರ್ ನಿವೃತ್ತಿ ಘೋಷಿಸಿ ಮಹೇಂದ್ರ ಸಿಂಗ್ ಧೋನಿ ಅಚ್ಚರಿ ಮೂಡಿಸಿದ್ದರು. ಆದರೆ ಅವರ ದಿಢೀರ್ ನಿವೃತ್ತಿ ಘೋಷಣೆಗೆ...

ಪುಣೆ: ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕತ್ವಕ್ಕೆ ದಿಢೀರ್ ನಿವೃತ್ತಿ ಘೋಷಿಸಿ ಮಹೇಂದ್ರ ಸಿಂಗ್ ಧೋನಿ ಅಚ್ಚರಿ ಮೂಡಿಸಿದ್ದರು. ಆದರೆ ಅವರ ದಿಢೀರ್ ನಿವೃತ್ತಿ ಘೋಷಣೆಗೆ ಅಸಲಿ ಕಾರಣ ಇಲ್ಲಿದೆ.

ಕ್ರಿಕೆಟ್ ಮೂರು ಮಾದರಿಗಳ ತಂಡಕ್ಕೂ ಪ್ರತ್ಯೇಕ ನಾಯಕರಿರುವ ಪದ್ಧತಿ ಭಾರತೀಯ ಕ್ರಿಕೆಟ್ ಗೆ ಸರಿ ಹೊಂದುವುದಿಲ್ಲ ಹೀಗಾಗಿ ನಾನು ಸೀಮಿತ ಓವರ್ ತಂಡದ ನಾಯಕತ್ವಕ್ಕೆ ನಿವೃತ್ತಿ ಘೋಷಿಸಿದೆ ಎಂದು ಧೋನಿ ಹೇಳಿದ್ದಾರೆ.

ಸದ್ಯ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ತಂಡಕ್ಕೆ ವಿರಾಟ್ ಕೊಹ್ಲಿ ಸಾರಥ್ಯ ವಹಿಸಿದ್ದಾರೆ. ಅಂತೆ ಏಕದಿನ ಮತ್ತು ಟಿ20 ಮಾದರಿಗೂ ಒಬ್ಬರೆ ನಾಯಕನಾದರೇ ತಂಡವನ್ನು ಉತ್ತಮವಾಗಿ ಮುನ್ನಡೆಸಬಹುದು ಎಂದು ಹೇಳಿದರು. ಬಳ ಹಿಂದೆಯೇ ತಾನು ಪದತ್ಯಾಗದ ನಿರ್ಧಾರ ತೆಗೆದುಕೊಂಡಿದ್ದೇ ಅದನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೂ ತಿಳಿಸಿದ್ದೆ. ಆದರೆ ಇದನ್ನು ಬಹಿರಂಗಪಡಿಸಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದೆ ಎಂದು ಧೋನಿ ಹೇಳಿದ್ದಾರೆ.

ಇನ್ನು ನಾಯಕತ್ವ ತ್ಯಜಿಸಿದರೂ ನೂತನ ನಾಯಕನಾಗಿರುವ ಕೊಹ್ಲಿಗೆ ಸಲಹೆ ಸೂಚನೆಗಳನ್ನು ನೀಡುವ ಕೆಲಸ ಮುಂದುವರಿಸುತ್ತೇನೆ. ವಿಕೆಟ್ ಕೀಪರ್ ಯಾವಾಗಲೂ ತಂಡದ ಉಪನಾಯಕನಿದ್ದಂತೆ. ನಾಯಕನಿಗೆ ಏನು ಬೇಕು ಎಂಬುದರ ಬಗ್ಗೆ ನಾನು ಸದಾ ಗಮನವಿಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT