1987ರಲ್ಲಿ ವಿಶ್ವಕಪ್ ಗೆದ್ದ ಅಲನ್ ಬಾರ್ಡರ್ ಪಡೆ 
ಕ್ರಿಕೆಟ್

ಆಸಿಸ್ ಗೆ ಮೊದಲ ವಿಶ್ವಕಪ್ ಗೆಲ್ಲಿಸಿಕೊಟ್ಟ ಅಲನ್ ಬಾರ್ಡರ್ ಪಡೆಗೆ 30 ವರ್ಷಗಳ ಬಳಿಕ ಪದಕ ಪ್ರದಾನ!

1987ರಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ವಿಶ್ವಕಪ್ ಗೆಲ್ಲಿಸಿಕೊಟ್ಟ ತಂಡಕ್ಕೆ ಭಾನುವಾರ ಪದಕ ಪ್ರದಾನ ಮಾಡಲಾಗುತ್ತಿದೆ...

ಸಿಡ್ನಿ: 1987ರಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ವಿಶ್ವಕಪ್ ಗೆಲ್ಲಿಸಿಕೊಟ್ಟ ತಂಡಕ್ಕೆ ಭಾನುವಾರ ಪದಕ ಪ್ರದಾನ ಮಾಡಲಾಗುತ್ತಿದೆ...

ಹೌದು...1987ರಲ್ಲಿ ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಅಲನ್ ಬಾರ್ಡರ್ ನೇತೃತ್ವದ ಆಸ್ಟ್ರೇಲಿಯಾ ತಂಡ 7 ರನ್ ಗಳ ಅಂತರದಿಂದ ಮಣಿಸಿತ್ತು. ಅದರೆ ಅಂದಿನ  ಪ್ರಶಸ್ತಿ ಸಮಾರಂಭದ ವೇಳೆ ವಿಜೇತರಿಗೆ ವಿಶ್ವಕಪ್ ಟ್ರೋಫಿ ಮಾತ್ರ ನೀಡಲಾಗಿತ್ತು. ಹೀಗಾಗಿ ಅಂದು ಟ್ರೋಫಿ ಗೆದ್ದ ಆಸ್ಟ್ರೇಲಿಯಾ ತಂಡದ ಎಲ್ಲ ಸದಸ್ಯರಿಗೆ ಇಂದು ಪದಕ ಪ್ರದಾನ ಮಾಡಲಾಗುತ್ತಿದೆ. ಅಂದಿನ ಆಸ್ಟ್ರೇಲಿಯಾ  ತಂಡದ ನಾಯಕ ಮತ್ತು ಕ್ರಿಕೆಟ್ ಲೆಜೆಂಡ್ ಅಲನ್ ಬಾರ್ಡರ್ ಮತ್ತು ಅವರ 14 ಮಂದಿಯ ತಂಡ, ತಂಡದ ಮ್ಯಾನೇಜರ್ ಅಲನ್ ಕ್ರಾಂಪ್ಟನ್, ಕೋಚ್ ಬಾಬ್ ಸಿಂಪ್ಸನ್, ಫಿಸಿಯೋ ಥೆರಪಿಸ್ಟ್ ಇರ್ರೋಲ್ ಅಲ್ಕಾಟ್ ಅವರಿಗೆ ಸಿಡ್ನಿಯ  ಎಸ್ ಸಿಜಿ ಮೈದಾನದಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಾಲ್ಕನೇ ಏಕದಿನ ಪಂದ್ಯ ನಡೆಯಲಿದ್ದು, ಪಂದ್ಯದ ವಿರಾಮದ ಸಂದರ್ಭದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ವಿಶ್ವಕಪ್ ಗೆದ್ದುಕೊಟ್ಟ ತಂಡಕ್ಕೆ  ಪದಕ ಪ್ರದಾನ ಮಾಡಲಾಗುತ್ತದೆ. ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆಯ ಮುಖ್ಯಸ್ಥ ಹಾಗೂ ಐಸಿಸಿ ನಿರ್ದೇಶಕ ಡೇವಿಡ್ ಪೀವರ್ ಅವರು ಪದಕ ಪ್ರದಾನ ಮಾಡಲಿದ್ದಾರೆ.

2016ರಲ್ಲಿ ಐಸಿಸಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮಿತಿಯು ವಿಶ್ವಕಪ್ ಟೂರ್ನಿಯಲ್ಲಿ ಈ ವರೆಗೂ ಪದಕ ಸ್ವೀಕರಿಸದ ತಂಡಗಳಿಗೆ ಪದಕ ಪ್ರದಾನ ಮಾಡುವಂತೆ ಶಿಫಾರಸ್ಸು ಮಾಡಿತ್ತು. ಸಮಿತಿ ಶಿಫಾರಸ್ಸಿನ ಅನ್ವಯ  ಇದೀಗ ಅಲನ್ ಬಾರ್ಡರ್ ಪಡೆಗೆ ಪದಕ ಪ್ರದಾನ ಮಾಡಲಾಗುತ್ತಿದೆ. 2003ರವರೆಗೂ ಪದಕ ಪ್ರದಾನ ಟೂರ್ನಿ ಆಯೋಜಿಸುವ ದೇಶಗಳ ಆಯ್ಕೆಗೆ ಬಿಟ್ಟ ವಿಚಾರವಾಗಿತ್ತು. ಇದರಲ್ಲಿ ಐಸಿಸಿ ಮಧ್ಯ ಪ್ರವೇಶಿಸುತ್ತಿರಲಿಲ್ಲ. 2003ರ ಬಳಿಕ  ಐಸಿಸಿ ಟೂರ್ನಿಯ ಪ್ರಶಸ್ತಿ ಸಮಾರಂಭದಲ್ಲೂ ತನ್ನನ್ನು ತೊಡಗಿಸಿಕೊಂಡು, ಟೂರ್ನಿಯ ಅಂತಿಮ ಘಟ್ಟಕ್ಕೆ ಬಂದ ತಂಡಗಳಿಗೆ ಪದಕ ಪ್ರದಾನ ಮಾಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT