ಅಶ್ವಿನ್, ಜಡೇಜಾ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ: ಅಶ್ವಿನ್, ಜಡೇಜಾ ವಿಶ್ರಾಂತಿ, ಮಿಶ್ರಾ, ರಸೂಲ್‌ಗೆ ಸ್ಥಾನ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾದ ಕೇರಂ ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಿಗೆ ಕೊಕ್ ನೀಡಲಾಗಿದೆ...

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾದ ಕೇರಂ ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಿಗೆ ಕೊಕ್ ನೀಡಲಾಗಿದೆ.

ಖ್ಯಾತ ಸ್ಪಿನ್ನರ್ ಗಳ ಬದಲಾಗಿ ಅಮಿತ್ ಮಿಶ್ರಾ ಮತ್ತು ಫರ್ವೀಸ್ ರಸೂಲ್ ಗೆ ಸ್ಥಾನ ನೀಡಲಾಗಿದೆ. ಟೀಂ ಇಂಡಿಯಾ ಆಯ್ಕೆ ಸಮಿತಿ, ಟೀಂ ಮ್ಯಾನೇಜ್‌ಮೆಂಟ್‌ ಈ ನಿರ್ಧಾರವನ್ನು ಕೈಗೊಂಡಿವೆ.

ಮುಂಬರುವ ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಈ ಇಬ್ಬರು ಸ್ಪಿನ್ನರ್ ಗಳಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಹಾಗೂ ಅಂತಿಮ ಪಂದ್ಯದಲ್ಲಿ ಜಡೇಜಾ ಮತ್ತು ಅಶ್ವಿನ್ ಇಬ್ಬರು ಟೀಂ ಇಂಡಿಯಾ ಪರ ಆಡಿದ್ದರು. ಈ ಪಂದ್ಯದಲ್ಲಿ ಭಾರತ 5 ರನ್ ಗಳಿಂದ ವಿರೋಚಿತ ಸೋಲು ಕಂಡಿತ್ತು. ಭಾರತ ಪರ ಜಡೇಜಾ 2 ವಿಕೆಟ್ ಪಡೆದಿದ್ದರು.

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಮೂರು ಪಂದ್ಯಗಳನ್ನು ಆಡಲಿದ್ದು ಮೊದಲ ಪಂದ್ಯ ಕಾನ್ಪುರ್ ನಲ್ಲಿ ಜನವರಿ 26 ರಂದು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT