ಎಸ್ ಶ್ರೀಶಾಂತ್ 
ಕ್ರಿಕೆಟ್

ಸ್ಕಾಟ್ಲೆಂಡ್ ಕ್ರಿಕೆಟ್ ಲೀಗ್‌ನಲ್ಲಿ ಆಡುವ ಶ್ರೀಶಾಂತ್ ಕನಸು ಭಗ್ನ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ವೇಗಿ ಎಸ್ ಶ್ರೀಶಾಂತ್ ಗೆ ನಿರಾಕ್ಷೇಪಣಾ ಪ್ರಮಾಣ ಪತ್ರ(ಎನ್ಒಸಿ) ನಿರಾಕರಿಸುವ ಮೂಲಕ ಮತ್ತೆ...

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ವೇಗಿ ಎಸ್ ಶ್ರೀಶಾಂತ್ ಗೆ ನಿರಾಕ್ಷೇಪಣಾ ಪ್ರಮಾಣ ಪತ್ರ(ಎನ್ಒಸಿ) ನಿರಾಕರಿಸುವ ಮೂಲಕ ಮತ್ತೆ ಕ್ರಿಕೆಟ್ ಆಡುವ ಕನಸು ಹೊತ್ತಿದ್ದ ಶ್ರೀಶಾಂತ್ ಗೆ ನಿರಾಸೆ ಮೂಡಿಸಿದೆ.

ಸ್ಕಾಟ್ಲೆಂಡ್ ಕ್ರಿಕೆಟ್ ಲೀಗ್ ನಲ್ಲಿ ಆಡುವ ಅವಕಾಶ ಶ್ರೀಶಾಂತ್ ಗೆ ಲಭಿಸಿತ್ತು. ಆಜೀವ ನಿಷೇಧವಿರುವ ಹಿನ್ನೆಲೆ ಶ್ರೀಶಾಂತ್ ಬಿಸಿಸಿಐಗೆ ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡುವಂತೆ ಮನವಿ ಮಾಡಿದ್ದರು.

2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಆರೋಪ ಸಾಬೀತಾದ ಕಾರಣ ಬಿಸಿಸಿಐ ಆಜೀವ ನಿಷೇಧ ಹೇರಿತ್ತು. ಈ ನಿಷೇಧವನ್ನು ತೆರವುಗೊಳಿಸುವ ಯಾವುದೇ ಅಭಿಪ್ರಾಯ ಇಲ್ಲ. ಅಲ್ಲದೆ ಮಂಡಳಿಯ ಯಾವುದೇ ಕ್ರಿಕೆಟ್ ಸೌಲಭ್ಯಗಳನ್ನು ಬಳಸಿಕೊಳ್ಳಲು ಶ್ರೀಶಾಂತ್ ಗೆ ಅನುಮತಿಯನ್ನು ಬಿಸಿಸಿಐ ನಿರಾಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT