ಸಂಗ್ರಹ ಚಿತ್ರ 
ಕ್ರಿಕೆಟ್

ಭಾರತೀಯ ಕ್ರಿಕೆಟ್ ತಂಡದ ತರಬೇತುದಾರ ರಾಜೇಶ್ ಸಾವಂತ್ ಸಾವು!

ಭಾರತ ಎ ಮತ್ತು ಅಂಡರ್ 19 ಕ್ರಿಕೆಟ್ ತಂಡಕ್ಕೆ ತರಬೇತುದಾರರಾಗಿದ್ದ ರಾಜೇಶ್ ಸಾವಂತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ಭಾನುವಾರ ನಡೆದಿದೆ.

ಮುಂಬೈ: ಭಾರತ ಎ ಮತ್ತು ಅಂಡರ್ 19 ಕ್ರಿಕೆಟ್ ತಂಡಕ್ಕೆ ತರಬೇತುದಾರರಾಗಿದ್ದ ರಾಜೇಶ್ ಸಾವಂತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ಭಾನುವಾರ ನಡೆದಿದೆ.

ದಕ್ಷಿಣ ಮುಂಬೈನ ಹೊಟೆಲ್ ಕೋಣೆಯಲ್ಲಿ ರಾಜೇಶ್ ಸಾವಂತ್ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಮೂಲಗಳ ಪ್ರಕಾರ ಇಂದು ಬೆಳಗಿನ ಹೊತ್ತಿಗೆ ರಾಜೇಶ್ ಕ್ರಿಕೆಟ್ ತರಬೇತಿಗೆ  ಆಗಮಿಸಬೇಕಿತ್ತು. ಆದರೆ ಅವರು ತರಬೇತಿ ಆಗಮಿಸದ ಹಿನ್ನಲೆಯಲ್ಲಿ ಸಿಬ್ಬಂದಿಗಳು ಅವರ ಕೊಠಡಿಗೆ ಆಟಗಾರನನ್ನು ಕಳುಹಿಸಿದ್ದಾರೆ. ಈ ವೇಳೆ ರಾಜೇಶ್ ಸಾವನ್ನಪ್ಪಿರುವ ವಿಚಾರ ಬಯಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಿಸಿಸಿಐ ಮ್ಯಾನೇಜರ್ ರತ್ನಾಕರ್ ಶೆಟ್ಟಿ ಅವರು, ಹೃದಯಾಘಾತದಿಂದ ರಾಜೇಶ್ ಮೃತಪಟ್ಟಿರುವ ಸಾಧ್ಯತೆಗಳಿವೆ. ಆದರೂ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದಿದ್ದು. ತನಿಖೆ  ನಡೆಸುತ್ತಿದ್ದಾರೆ. ರಾಜೇಶ್ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಈ ಹಿಂದೆ ಆಫ್ಘಾನಿಸ್ತಾನದ ವಿರುದ್ಧ ನಡೆದ ಸರಣಿಯಲ್ಲಿ ಭಾರತ ಎ ತಂಡಕ್ಕೆ ರಾಜೇಶ್ ತರಬೇತಿ ನೀಡಿದ್ದರು. ಈ ತಂಡಕ್ಕೆ ಮಾಜಿ ಕ್ರಿಕೆಟಿಗ ಹಾಗೂ ಪ್ರಸ್ತುತ ಅಂಡರ್ 19 ಕ್ರಿಕೆಟ್ ತಂಡದ ಕೋಚ್ ದ್ರಾವಿಡ್ ಅವರು ಪ್ರಧಾನ  ಕೋಚ್ ಆಗಿದ್ದರು. ಅಂತೆಯೇ ರಾಜೇಶ್ ಶೇಷ ಭಾರತ ತಂಡಕ್ಕೂ ತರಬೇತಿ ನೀಡಿದ್ದು, ಈ ಹಿಂದೆ ನಡೆದ ಇರಾನ್ ಕಪ್ ನಲ್ಲಿ ಗುಜರಾತ್ ತಂಡವನ್ನು ಈ ತಂಡ ಎದುರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT