ಸೆಹ್ವಾಗ್ 
ಕ್ರಿಕೆಟ್

ಸೆಹ್ವಾಗ್ ರನ್ನು ಕೋಚ್ ಸ್ಥಾನಕ್ಕೆ ನೇಮಕ ಮಾಡಲು ಬಿಸಿಸಿಐ ಹಿಂದೇಟು ಹಾಕುತ್ತಿರುವುದಕ್ಕೆ ಕಾರಣ ಗೊತ್ತೆ?

ರವಿ ಶಾಸ್ತ್ರಿಗಿಂತಲೂ ಮುಂಚೂಣಿಯಲ್ಲಿದ್ದ ವಿರೇಂದ್ರ ಸೆಹ್ವಾಗ್ ಅವರನ್ನು ಕೋಚ್ ಸ್ಥಾನಕ್ಕೆ ನೇಮಕ ಮಾಡಲು ಬಿಸಿಸಿಐ ಹಿಂದೇಟು ಹಾಕುತ್ತಿರುವುದಕ್ಕೆ...

ನವದೆಹಲಿ: ರವಿ ಶಾಸ್ತ್ರಿ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸುವುದು ಖಾತ್ರಿಯಾಗುವವರೆಗೂ ಆ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅವರ ಹೆಸರು ಮುಂಚೂಣಿಯಲ್ಲಿತ್ತು. 
ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ವಿರೇಂದ್ರ ಸೆಹ್ವಾಗ್, ಕಿಂಗ್ಸ್ XI ಪಂಜಾಬ್ ತಂಡಕ್ಕೆ ಮಾರ್ಗದರ್ಶಕ, ಕೋಚ್ ಹಾಗೂ ಈ ಎಲ್ಲಾ ಆಟಗಾರರೊಂದಿಗೆ ಕ್ರಿಕೆಟ್ ಪಂದ್ಯಗಳಲ್ಲಿ ಆಡಿದ್ದೇನೆ ಎಂದಷ್ಟೇ ಹೇಳಿದ್ದರು. ಈ ಬಳಿಕ ಮತ್ತಷ್ಟು ವಿಸ್ತಾರವಾದ ಅರ್ಜಿಯನ್ನು ಸಲ್ಲಿಸುವಂತೆ ಬಿಸಿಸಿಐ ಸೆಹ್ವಾಗ್ ಗೆ ತಿಳಿಸಿತ್ತು ಎನ್ನಲಾಗಿದೆ.
ರವಿ ಶಾಸ್ತ್ರಿಗಿಂತಲೂ ಮುಂಚೂಣಿಯಲ್ಲಿದ್ದ ವಿರೇಂದ್ರ ಸೆಹ್ವಾಗ್ ಅವರನ್ನು ಕೋಚ್ ಸ್ಥಾನಕ್ಕೆ ನೇಮಕ ಮಾಡಲು ಬಿಸಿಸಿಐ ಹಿಂದೇಟು ಹಾಕುತ್ತಿರುವುದಕ್ಕೆ ವಿರೇಂದ್ರ ಸೆಹ್ವಾಗ್ ನೇರ ನುಡಿಯ ವ್ಯಕ್ತಿತ್ವ ಹೊಂದಿರುವವರಾಗಿರುವುದು ಮತ್ತೊಂದು ಕಾರಣವಾಗಿದೆ. 
ಡೆಕನ್ ಕ್ರಾನಿಕಲ್ ವರದಿಯ ಪ್ರಕಾರ, ವಿರೇಂದ್ರ ಸೆಹ್ವಾಗ್ ಅವರು ಟ್ವಿಟರ್ ನಲ್ಲಿ ನೇರಾನೇರವಾಗಿ ಮಾತನಾಡುತ್ತಾರೆ, ಆದ್ದರಿಂದ ಅವರನ್ನು ಕೋಚ್ ಆಗಿ ನೇಮಕ ಮಾಡುವುದಕ್ಕೆ ಬಿಸಿಸಿಐ ಹಿಂದೇಟು ಹಾಕುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಈ ಬಗ್ಗೆ ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿರುವ ಕ್ರಾನಿಕಲ್ ವರದಿ, ಒಂದು ವೇಳೆ ಸೆಹ್ವಾಗ್ ಅವರನ್ನು ಕೋಚ್ ಆಗಿ ನೇಮಿಸಿದರೆ ಟ್ವಿಟರ್ ನಲ್ಲಿ ನೇರಾ ನೇರವಾಗಿ ಮಾತನಾಡದಂತೆ ಷರತ್ತು ವಿಧಿಸಬಹುದು, ಆದರೆ ಒಂದು ವೇಳೆ ಭಾರತ ಪಂದ್ಯವನ್ನೋ, ಸರಣಿಯನ್ನೋ ಸೋತರೆ ಸೆಹ್ವಾಗ್ ಅವರು "ಸೋ ವಾಟ್ (so what) ಎಂದು ಪ್ರಶ್ನಿಸಿದರೆ ಮುಜುಗರ ಎದುರಿಸಬೇಕಾಗುತ್ತದೆ ಎಂಬುದು ಬಿಸಿಸಿಐ ನ ಆತಂಕವಾಗಿದೆ ಎಂದು ಹೇಳಿದೆ. 
ವಿರೇಂದ್ರ ಸೆಹ್ವಾಗ್ ಹೊರತಾಗಿ ಈಗ ರವಿಶಾಸ್ತ್ರಿ, ಆಸ್ಟ್ರೇಲಿಯಾದ ಬೌಲರ್ ಟಾಮ್ ಮೂಡಿ, ಇಂಗ್ಲೆಂಡ್​ನ ರಿಚರ್ಡ್ ಪೈಬಸ್, ಭಾರತ ತಂಡದ ಮಾಜಿ ಆಟಗಾರರಾದ ಲಾಲ್​ಚಂದ್ ರಜಪೂತ್ ಹಾಗೂ ಕರ್ನಾಟಕದ ದೊಡ್ಡ ಗಣೇಶ್ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT