ಸೌರವ್ ಗಂಗೂಲಿ 
ಕ್ರಿಕೆಟ್

ರವಿಶಾಸ್ತ್ರಿ ನೇಮಕಕ್ಕೆ ಗಂಗೂಲಿ ವಿರೋಧವೇ ಅಧಿಕೃತ ಘೋಷಣೆ ವಿಳಂಬಕ್ಕೆ ಕಾರಣ!

ಮಂಗಳವಾರ ನಡೆದ ಟೀಂ ಇಂಡಿಯಾದ ನೂತನ ಕೋಚ್ ನೇಮಕ ಹೈಡ್ರಾಮ ಕೊನೆಗೂ ಮುಕ್ತಾಯವಾಗಿದೆಯಾದರೂ, ಬಿಸಿಸಿಐನ ಈ ಗೊಂದಲಕ್ಕೆ ಕ್ರಿಕೆಟ್ ಸಲಹಾ ಸಮಿತಿ ಸದಸ್ಯ ಸೌರವ್ ಗಂಗೂಲಿ ಅವರೇ ಕಾರಣ ಎಂದು ಹೇಳಲಾಗುತ್ತಿದೆ.

ಮುಂಬೈ: ಮಂಗಳವಾರ ನಡೆದ ಟೀಂ ಇಂಡಿಯಾದ ನೂತನ ಕೋಚ್ ನೇಮಕ ಹೈಡ್ರಾಮ ಕೊನೆಗೂ ಮುಕ್ತಾಯವಾಗಿದೆಯಾದರೂ, ಬಿಸಿಸಿಐನ ಈ ಗೊಂದಲಕ್ಕೆ ಕ್ರಿಕೆಟ್ ಸಲಹಾ ಸಮಿತಿ ಸದಸ್ಯ ಸೌರವ್ ಗಂಗೂಲಿ ಅವರೇ ಕಾರಣ ಎಂದು ಹೇಳಲಾಗುತ್ತಿದೆ.

ಬಿಸಿಸಿಐ ಮೂಲಗಳ ಪ್ರಕಾರ ನಿನ್ನೆಯ ಕೋಚ್ ಆಯ್ಕೆ ಕುರಿತ ಗೊಂದಲಕ್ಕೆ ಸೌರವ್ ಗಂಗೂಲಿ ಅವರೇ ಕಾರಣ ಎಂದು ಹೇಳಲಾಗುತ್ತಿದೆ. ಕ್ರಿಕೆಟ್ ಸಲಹಾ ಸಮಿತಿ ಸದಸ್ಯರೂ ಕೂಡ ಆಗಿರುವ ಸೌರವ್ ಗಂಗೂಲಿ ಅವರಿಗೆ ರವಿಶಾಸ್ತ್ರಿ  ಟೀಂ ಇಂಡಿಯಾ ಕೋಚ್ ಆಗುವುದು ಸುತಾರಾಂ ಇಷ್ಟವಿರಲಿಲ್ಲವಂತೆ. ಸಿಎಸಿಯ ಇತರೆ ಸದಸ್ಯರಾದ ಸಚಿನ್ ತೆಂಡೂಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್ ರವಿಶಾಸ್ತ್ರಿಗೆ ಗ್ರೀನ್ ಸಿಗ್ನಲ್ ನೀಡಿದ್ದರೂ ಸೌರವ್ ಗಂಗೂಲಿ ಮಾತ್ರ ಒಪ್ಪಿಗೆ  ನೀಡಿರಲಿಲ್ಲವಂತೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಆದರೆ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಒಲವು ರವಿಶಾಸ್ತ್ರಿ ಪರವಾಗಿ ಇದ್ದ ಕಾರಣ ಸಿಎಸಿ ಸದಸ್ಯರು ಸೌರವ್ ಗಂಗೂಲಿ ಅವರನ್ನು ಓಲೈಕೆ ಮಾಡಿದರಂತೆ. ಈ ವೇಳೆ ಮಧ್ಯ ಪ್ರವೇಶಿಸಿದ್ದ ಸಚಿನ್ ತೆಂಡೂಲ್ಕರ್ ಅವರು  ಗಂಗೂಲಿ ಜೊತೆ ಸಂಧಾನ ನಡೆಸಿ ಅವರನ್ನು ಸಂತೈಸಿದ್ದರು. ಈ ವೇಳೆ ಏಕೈಕ ಷರತ್ತಿನ ಮೇರೆಗೆ ಗಂಗೂಲಿ ರವಿಶಾಸ್ತ್ರಿ ಅವರನ್ನು ನೂತನ ಕೋಚ್ ಆಗಿ ನೇಮಿಸಲು ಒಪ್ಪಿಗೆ ಸೂಚಿಸಿದ್ದಾರೆ. ಅದೇನೆಂದರೆ ಟೀಂ ಇಂಡಿಯಾದ  ಮಾಜಿ ಆಟಗಾರ ಜಹೀರ್ ಖಾನ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಕ ಮಾಡಿದರೆ ಮಾತ್ರ ರವಿಶಾಸ್ತ್ರಿ ಅವರನ್ನು ಕೋಚ್ ಆಗಿ ನೇಮಕ ಮಾಡಲು ಒಪ್ಪಿಗೆ ನೀಡುವುದಾಗಿ ಹೇಳಿದರಂತೆ.

ಇದೇ ಕಾರಣಕ್ಕೆ ಸಚಿನ್ ತೆಂಡೂಲ್ಕರ್ ಅವರು ಜಹೀರ್ ಖಾನ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಿಸಲು ಹೆಸರು ಸೂಚಿಸಿದರು ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು ಭರತ್ ಅರುಣ್ ಅವರನ್ನು ಬೌಲಿಂಗ್ ಕೋಚ್ ಆಗಿ  ನೇಮಿಸಲು ನಿರ್ಧರಿಸಲಾಗಿತ್ತಾದರೂ ಅಂತಿಮ ಕ್ಷಣದಲ್ಲಿ ಜಹೀರ್ ಖಾನ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT