ಕ್ರಿಕ್ ಇನ್ಫೋ ಚಿತ್ರ 
ಕ್ರಿಕೆಟ್

ಕಿವೀಸ್ ಕಿವಿ ಹಿಂಡಿದ ಭಾರತ; ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡಿಗರ ಸಾಧನೆ!

ಶನಿವಾರ ಲಂಡನ್ ಡರ್ಬಿಯಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಅಂತಿಮ ಲೀಗ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಬಗ್ಗು ಬಡಿದ್ದಿದ್ದು, ಈ ಗೆಲುವಿನಲ್ಲಿ ಕರ್ನಾಟಕದ ಇಬ್ಬರು ಆಟಗಾರ್ತಿಯರ ಪಾತ್ರ ನಿರ್ಣಾಯಕವಾಗಿತ್ತು.

ಡರ್ಬಿ: ಶನಿವಾರ ಲಂಡನ್ ಡರ್ಬಿಯಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಅಂತಿಮ ಲೀಗ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಬಗ್ಗು ಬಡಿದ್ದಿದ್ದು, ಈ ಗೆಲುವಿನಲ್ಲಿ ಕರ್ನಾಟಕದ ಇಬ್ಬರು ಆಟಗಾರ್ತಿಯರ  ಪಾತ್ರ ನಿರ್ಣಾಯಕವಾಗಿತ್ತು.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಆರಂಭಿಕರಾದ ಸ್ಮೃತಿ ಮಂದಾನಾ ಹಾಗೂ ರೌತ್ 21 ರನ್ ಗಳಾಗುವಷ್ಟರಲ್ಲೇ ವಿಕೆಟ್  ಕಳೆದುಕೊಳ್ಳುವುದರೊಂದಿಗೆ ತಂಡ ಒತ್ತಡಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕ್ರೀಸ್ ಗಿಳಿದ ನಾಯಕಿ ಮಿಥಾಲಿ ರಾಜ್ ಹಾಗೂ ಕೌರ್ ಉತ್ತಮ ಜೊತೆಯಾಟ ನೀಡಿದರು. ಇವರಿಬ್ಬರ ಉತ್ತಮ ಜೊತೆಯಾಟದ ನೆರವಿನಿಂದ ಭಾರತ 150  ರನ್ ಗಳ ದಾಟಿತು. ಆದರೆ ಈ ಹಂತದಲ್ಲಿ ಉತ್ತಮವಾಗಿ ಆಡುತ್ತಿದ್ದ ಕೌರ್ 60 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಂದು ತುದಿಯಲ್ಲಿ ಉತ್ತಮವಾಗಿ ಆಡುತ್ತಿದ್ದ ನಾಯಕಿ ಮಿಥಾಲಿ ರಾಜ್ ಅವರಿಗೆ ಯಾರೂ ಸಾಥ್ ನೀಡಲಿಲ್ಲ. ಕೌರ್  ಬಳಿಕ ಬಂದ ಶರ್ಮಾ ಕೂಡ ಶೂನ್ಯಕ್ಕೆ ಔಟ್ ಆಗುವುದರೊಂದಿಗೆ ಭಾರತ ಮತ್ತಷ್ಟು ಒತ್ತಡಕ್ಕೆ ಸಿಲುಕಿತ್ತು.

ಭಾರತ 37ನೇ ಓವರ್ ನಲ್ಲಿ ಬ್ಯಾಟಿಂಗ್ ಮಾಡುತ್ತಿತ್ತು. ಆದರೆ ಗಳಿಸಿದ್ದ ಮೊತ್ತ ಮಾತ್ರ ಕೇವಲ 154 ರನ್ ಗಳು. ಉಳಿದಿರುವ 13 ಓವರ್ ಗಳಲ್ಲಿ ಭಾರತ ಹೆಚ್ಚೆಚ್ಚು ರನ್ ಗಳಿಸು ಒತ್ತಡಕ್ಕೆ ಸಿಲುಕಿತು. ಈ ಹಂತದಲ್ಲಿ ಬ್ಯಾಟಿಂಗ್ ಗೆ  ಇಳಿದ ಕನ್ನಡತಿ ವೇದಾ ಕೃಷ್ಣಮೂರ್ತಿ ಮೈದಾನದಲ್ಲಿ ಮಿಂಚು ಹರಿಸಿದರು. ಕೇವಲ 45 ಎಸೆತಗಳನ್ನು ಎದುರಿಸಿದ ಅವರು 2 ಭರ್ಜರಿ ಸಿಕ್ಸರ್ ಹಾಗೂ 7 ಬೌಂಡರಿಗಳ ಸಹಿತ 70 ರನ್ ಸಿಡಿಸಿದರು. ಇದೇ ಹೊತ್ತಿನಲ್ಲಿ ನಾಯಕಿ  ಮಿಥಾಲಿ ಕೂಡ ಶತಕ ಸಿಡಿಸಿ ಸಂಭ್ರಮಿಸಿದರು. ಇವರಿಬ್ಬರ ಹೋರಾಟದ ಫಲವಾಗಿ ಭಾರತ ತಂಡ 50 ಓವರ್ ಗಳಲ್ಲಿ 265 ರನ್ ಗಳನ್ನು ಕಲೆಹಾಕಿತು.

ಇನ್ನು ಬೌಲಿಂಗ್ ನಲ್ಲಿ ಕಿವೀಸ್ ಪಡೆಯನ್ನು ಕಾಡಿದ್ದು ಮತ್ತೋರ್ವ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್..ಕಿವೀಸ್ ಪಡೆ ಬ್ಯಾಟಿಂಗ್ ಇಳಿಯುತ್ತಿದ್ದಂತೆಯೇ ಪಾಂಡೆ ಮತ್ತು ಗೋಸ್ವಾಮಿ ಆರಂಭಿಕರ ವಿಕೆಟ್ ಪಡೆದು ಒತ್ತಡಕ್ಕೆ  ಸಿಲುಕಿಸಿದರು. ಬಳಿಕ ಮೈದಾನದಲ್ಲಿ ನಡೆದಿದ್ದ ಅಕ್ಷರಶಃ ರಾಜೇಶ್ವರಿ ಅವರ ಬೌಲಿಂಗ್ ಮಿಂಚು...ಕೇವಲ 7.3 ಓವರ್ ಗಳನ್ನು ಎಸೆದ ರಾಜೇಶ್ವರ್ ಗಾಯಕ್ವಾಡ್ ಅವರು 15 ರನ್ ಗಳನ್ನು ನೀಡಿ ಕಿವೀಸ್ ಪಡೆಯ ಐದು ಪ್ರಮುಖ  ವಿಕೆಟ್ ಗಳನ್ನು ಕಬಳಿಸಿದರು. ಅವರಿಗೆ ಶರ್ಮಾ ಕೂಡ ಉತ್ತಮ ಸಾಥ್ ನೀಡಿ 2 ವಿಕೆಟ್ ಕಬಳಿಸಿದರು.

ಅಂತಿಮವಾಗಿ ಭಾರತ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಸಾಂಘಿಕ ಹೋರಾಟ ಪ್ರದರ್ಶಿಸಿ ಕಿವೀಸ್ ವಿರುದ್ಧ ಭರ್ಜರಿ 186 ರನ್ ಗಳ ಜಯ ದಾಖಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT