ಮುರಳಿ ವಿಜಯ್-ಶಿಖರ್ ಧವನ್ 
ಕ್ರಿಕೆಟ್

ಶ್ರೀಲಂಕಾ ಪ್ರವಾಸ: ಟೆಸ್ಟ್‌ನಲ್ಲಿ ಮುರಳಿ ವಿಜಯ್‌ಗೆ ಕೊಕ್, ಶಿಖರ್ ಧವನ್‍ಗೆ ಸ್ಥಾನ

ಮುಂಬರುವ ಶ್ರೀಲಂಕಾ ಪ್ರವಾಸದ ಟೀಂ ಇಂಡಿಯಾದ ಟೆಸ್ಟ್ ತಂಡದಲ್ಲಿ ಗಾಯಾಳು ಮುರಳಿ ವಿಜಯ್ ಬದಲಿಗೆ ಶಿಖರ್ ಧವನ್ ಸ್ಥಾನ ನೀಡಲಾಗಿದೆ...

ನವದೆಹಲಿ: ಮುಂಬರುವ ಶ್ರೀಲಂಕಾ ಪ್ರವಾಸದ ಟೀಂ ಇಂಡಿಯಾದ ಟೆಸ್ಟ್ ತಂಡದಲ್ಲಿ ಗಾಯಾಳು ಮುರಳಿ ವಿಜಯ್ ಬದಲಿಗೆ ಶಿಖರ್ ಧವನ್ ಸ್ಥಾನ ನೀಡಲಾಗಿದೆ.
ಜುಲೈ 26ರಿಂದ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದ್ದು ಟೀಂ ಇಂಡಿಯಾ ತಂಡದ 16ರ ಬಳಗದಲ್ಲಿ ಮುರಳಿ ವಿಜಯ್ ಬದಲಿಗೆ ಶಿಖರ್ ಧವನ್ ರನ್ನು ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ಆಯ್ಕೆ ಮಾಡಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಅಮಿತಾಬ್ ಚೌಧರಿ ಹೇಳಿದ್ದಾರೆ. 
ಭಾರತ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ನಾಲ್ಕು ಟೆಸ್ಟ್ ಸರಣಿಯನ್ನು ಆಡಿತ್ತು. ಈ ಸರಣಿಯಲ್ಲಿ ಮುರಳಿ ವಿಜಯ್ ಬಲಗಾಲಿನ ಮಂಡಿ ನೋವಿಗೆ ತುತ್ತಾಗಿದ್ದರು. ಸರಣಿ ಮುಗಿದು ನಾಲ್ಕು ತಿಂಗಳಾದರೂ ಗಾಯಗೊಂಡಿದ್ದ ಮುರಳಿ ವಿಜಯ್ ಫೀಟ್ ಆಗದೆ ಇರುವುದೇ ಟೆಸ್ಟ್ ತಂಡದಿಂದ ಅವರನ್ನು ಕೈಬಿಡಲು ಕಾರಣವಾಗಿದೆ. 
ಏಕದಿನ ತಂಡದಲ್ಲಿ ಸ್ಥಾನ ಭದ್ರ ಪಡಿಸಿಕೊಂಡಿರುವ ಶಿಖರ್ ಧವನ್, ಒಟ್ಟಾರೆ 23 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 38.52ರ ಸರಾಸರಿಯಲ್ಲಿ 1464 ರನ್ ಗಳನ್ನು ಮಾತ್ರ ಪೇರಿಸಿದ್ದರು. ಶಿಖರ್ ಧವನ್ 2016ರಲ್ಲಿ ಭಾರತ ಪ್ರವಾಸಕೈಗೊಂಡಿದ್ದ ನ್ಯೂಜಿಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. 
ಶ್ರೀಲಂಕಾ ಪ್ರವಾಸದಲ್ಲಿ ಭಾರತ ಮೂರು ಪಂದ್ಯಗಳ ಟೆಸ್ಟ್ ಸರಣಿ, 5 ಪಂದ್ಯಗಳ ಏಕದಿನ ಸರಣಿ ಮತ್ತು 1 ಟಿ20 ಪಂದ್ಯವನ್ನು ಆಡಲಿದೆ. 
ಟೆಸ್ಟ್ ತಂಡ
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ(ಉಪನಾಯಕ), ರೋಹಿತ್ ಶರ್ಮಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ವೃದ್ದಿಮಾನ್ ಸಹಾ, ಇಶಾಂತ್ ಶರ್ಮಾ, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಅಭಿನವ್ ಮುಕುಂದ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT