ಕ್ರಿಕ್ ಇನ್ಫೋ ಚಿತ್ರ 
ಕ್ರಿಕೆಟ್

ಇಂಗ್ಲೆಂಡ್ ಮುಡಿಗೆ ಐಸಿಸಿ ಮಹಿಳಾ ವಿಶ್ವಕಪ್!

ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 9 ರನ್ ಗಳ ಅಂತರದಲ್ಲಿ ಮಣಿಸಿದ ಇಂಗ್ಲೆಂಡ್ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ.

ಲಂಡನ್‌: ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 9 ರನ್ ಗಳ ಅಂತರದಲ್ಲಿ ಮಣಿಸಿದ ಇಂಗ್ಲೆಂಡ್ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ.
ಇಂಗ್ಲೆಂಡ್ ನೀಡಿದ್ದ 228 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟುವಲ್ಲಿ ಮಿಥಾಲಿ ರಾಜ್ ಪಡೆ ಕೇವಲ 219 ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ ಇಂಗ್ಲೆಂಡ್ ವಿರುದ್ಧ 9 ರನ್ ಗಳ ಅಂತರದಲ್ಲಿ ವಿರೋಚಿತ ಸೋಲು ಅನುಭವಿಸಿತು.
ಚೊಚ್ಚಲ ವಿಶ್ವಕಪ್‌ ಗೆಲ್ಲುವ ಮಹದಾಸೆಯೊಂದಿಗೆ ಕಣಕ್ಕಿಳಿದ ಮಿಥಾಲಿ ರಾಜ್‌ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ ಇಂಗ್ಲೆಂಡ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿತಾದರೂ, ಇಂಗ್ಲೆಂಡ್ ಪ್ರಭಾವಿ ಬೌಲಿಂಗ್ ದಾಳಿಗೆ ನಲುಗಿ 219 ರನ್ ಗಳಿಗೆ ಶರಣಾಯಿತು. ಇಂಗ್ಲಂಡ್‌ ತಂಡ ನೀಡಿದ 228 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟುವಲ್ಲಿ ವಿಫ‌ಲರಾದ ಭಾರತೀಯ ಮಹಿಳಾ ಆಟಗಾರ್ತಿಯರು ಅಂತಿಮವಾಗಿ 48.4 ಓವರುಗಳಲ್ಲಿ 219 ರನ್ ಗಳಿಗೆ ಆಲೌಟ್‌ ಆಗುವ ಮೂಲಕ ಹಾಲಿ ಚಾಂಪಿಯನ್ನರಿಗೆ 9 ರನ್ ಗಳಿಂದ ಶರಣಾದರು.
ಭಾರತಕ್ಕೆ ಪೂನಂ ರಾವತ್‌ (86ರನ್) ಉತ್ತಮ ಆರಂಭ ಒದಗಿಸಿದರು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ಸೆಮಿ ಫೈನಲ್‌ ಪಂದ್ಯದ ಹೀರೋಯಿನ್‌ ಹರ್ಮನ್‌ ಪ್ರೀತ್‌ ಕೌರ್‌ (51ರನ್) ಮತ್ತು ವೇದ ಕೃಷ್ಣಮೂರ್ತಿ (35ರನ್) ಚೊಚ್ಚಲ ವಿಶ್ವಕಪ್‌ ಗೆಲ್ಲುವ ಕನಸಿಗೆ ಇನ್ನಷ್ಟು ಬಲ ತುಂಬಿದರು. ಆದರೆ 19 ರನ್ ಗಳ ಅಂತರದಲ್ಲಿ ಪ್ರಮುಖ 5 ವಿಕೆಟ್‌ಗಳು ಉರುಳಿದ್ದು ಮಿಥಾಲಿ ಪಡೆಗೆ ಮಾರಕವಾಯಿತು.
ಇಂಗ್ಲಂಡ್‌ ಪರ ಮಧ್ಯಮ ವೇಗಿ ಆನ್ಯಾ ಶ್ರುಭ್ಸೋಲ್‌ 6 ವಿಕೆಟ್‌ ಪಡೆದು ಮಿಂಚಿ ಆಂಗ್ಲರ ಪಾಲಿನ ಗೆಲುವಿನ ರೂವಾರಿಯಾದರು. ಅಂತಿಮವಾಗಿ ಭಾರ‌ತ 219 ರನ್ ಗಳಿಗೆ ಆಲೌಟ್‌ ಆಗಿ ಕೇವಲ 9 ರನ್ ಗಳಿಂದ ವಿಶ್ವಕಪ್‌ ಟ್ರೋಫಿಗೆ ಮುತ್ತಿಕ್ಕುವ ಅವಕಾಶದಿಂದ ವಂಚಿತಗೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ