ವಿಕೆಟ್ ಪಡೆದ ಖುಷಿಯಲ್ಲಿ ರವೀಂದ್ರ ಜಡೇಜಾ ಮತ್ತು ತಂಡ 
ಕ್ರಿಕೆಟ್

ಗಾಲೆ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ 291 ರನ್ ಗಳಿಗೆ ಶ್ರೀಲಂಕಾ ಆಲೌಟ್, ಭಾರತಕ್ಕೆ 309 ರನ್ ಗಳ ಮುನ್ನಡೆ!

ಶ್ರೀಲಂಕಾದ ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ ತಂಡ 291 ರನ್ ಗಳಿಗೆ ಸರ್ವಪತನ ಕಂಡಿದ್ದು, ಭಾರತ 309 ರನ್ ಗಳ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ.

ಗಾಲೆ: ಶ್ರೀಲಂಕಾದ ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ ತಂಡ 291 ರನ್ ಗಳಿಗೆ ಸರ್ವಪತನ ಕಂಡಿದ್ದು, ಭಾರತ 309 ರನ್ ಗಳ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ.

ಭಾರತ ನೀಡಿದ್ದ 600 ರನ್ ಗಳ ಬೃಹತ್ ರನ್ ಗಳಿಗೆ ಎದುರಾಗಿ ಶ್ರೀಲಂಕಾ ತಂಡ ಕೇವಲ 291 ರನ್ ಗಳಿಗೆ ಆಲೌಟ್ ಆಗಿದ್ದು, ಆ ಮೂಲಕ ಭಾರತಕ್ಕೆ 309 ರನ್ ಗಳ ಮೊದಲ ಇನ್ನಿಂಗ್ಸ್ ಮುನ್ನಡೆ ನೀಡಿದೆ. ನಿನ್ನೆ 2ನೇ ದಿನದಾಟದಂ  ಅಂತ್ಯಕ್ಕೆ 154 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಶ್ರೀಲಂಕಾ ತಂಡ ಇಂದು 291 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ನಿನ್ನೆ ದಿನದಾಟದ ಅಂತ್ಯಕ್ಕೆ ಕ್ರೀಸ್ ಕಾಯ್ದುಕೊಂಡಿದ್ದ ಪೆರೇರಾ ಮತ್ತು ಮ್ಯಾಥ್ಯೂಸ್ ಜೋಡಿ ಇಂದು ಕೇವಲ 50 ರನ್ ಸೇರಿಸುವಷ್ಟರಲ್ಲೇ ಬೇರ್ಪಟ್ಟಿತು. 83 ರನ್ ಗಳಿಸಿ ಶತಕದತ್ತ ದಾಪುಗಾಲಿರಿಸಿದ್ದ ಮ್ಯಾಥ್ಯೂಸ್ ರನ್ನು ರವೀಂದ್ರ  ಜಡೇಜಾ ಔಟ್ ಮಾಡಿದರು. ಮ್ಯಾಥ್ಯೂಸ್ ಔಟ್ ಆಗುವುದರೊಂದಿಗೆ ಶ್ರೀಲಂಕಾ ಆಟಗಾರರ ಪೆವಿಲಿಯನ್ ಪರೇಡ್ ಕೂಡ ಆರಂಭವಾಯಿತು. ಡಿಕ್ ವೆಲ್ಲಾ (8 ರನ್), ರಂಗನಾ ಹೆರಾತ್ (9 ರನ್), ನುವಾನ್ ಪ್ರದೀಪ್ (10 ರನ್),  ಲಾಹಿರು ಕುಮಾರ (2 ರನ್) ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ಮತ್ತೊಂದು ತುದಿಯಲ್ಲಿದ್ದ ಪೆರಾರಾ ಮಾತ್ರ ಅಜೇಯ 92 ರನ ಗಳಿಸಿದ್ದರು. ಅವರಿಗೆ ಉಳಿದ ಬ್ಯಾಟ್ಸಮನ್ ಗಳಿಂದ ಉತ್ತಮ ಸಾಥ್  ದೊರೆಯಲಿಲ್ಲ. ಹೀಗಾಗಿ ಶ್ರೀಲಂಕಾ ತಂಡ 291 ರನ್ ಗಳಿಗೆ ಸರ್ವ ಪತನ ಕಂಡಿತು.

ಆ ಮೂಲಕ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 309 ರನ್ ಗಳ ಬೃಹತ್ ಮುನ್ನಡೆ ಪಡೆಯಿತು, ಇನ್ನು ಭಾರತದ ಪರ ಜಡೇಜಾ 3, ಶಮಿ 2 ವಿಕೆಟ್ ಪಡೆದರೆ, ಉಮೇಶ್ ಯಾದವ್, ಆರ್ ಆಶ್ವಿನ್, ಹಾರ್ದಿಕ್ ಪಾಂಡ್ಯಾ ತಲಾ 1 ವಿಕೆಟ್  ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT