ಮಿಥಾಲಿ ರಾಜ್ ಗೆ ತೆಲಂಗಾಣ ಸರ್ಕಾರದಿಂದ ಸನ್ಮಾನ 
ಕ್ರಿಕೆಟ್

ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಗೆ ಫ್ಲಾಟ್, 1 ಕೋಟಿ ನಗದು ಬಹುಮಾನ ಘೋಷಿಸಿದ ತೆಲಂಗಾಣ

ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ವರೆಗೂ ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕಿ ಮಿಥಾಲಿ ರಾಜ್‌ಗೆ ಬಹುಮಾನಗಳ ಮಹಾಪೂರವೇ ಹರಿದು ಬರುತ್ತಿದ್ದು, ಮಿಥಾಲಿ ರಾಜ್ ಗೆ ತೆಲಂಗಾಣ ಸರ್ಕಾರ ಒಂದು ನಿವೇಶನ ಹಾಗೂ 1 ಕೋಟಿ. ರು.ನಗದು ಬಹುಮಾನ ಘೋಷಣೆ ಮಾಡಿದೆ.

ಹೈದರಾಬಾದ್: ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ವರೆಗೂ ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕಿ ಮಿಥಾಲಿ ರಾಜ್‌ಗೆ ಬಹುಮಾನಗಳ ಮಹಾಪೂರವೇ ಹರಿದು ಬರುತ್ತಿದ್ದು, ಮಿಥಾಲಿ  ರಾಜ್ ಗೆ ತೆಲಂಗಾಣ ಸರ್ಕಾರ ಒಂದು ನಿವೇಶನ ಹಾಗೂ 1 ಕೋಟಿ. ರು.ನಗದು ಬಹುಮಾನ ಘೋಷಣೆ ಮಾಡಿದೆ.

ಇತ್ತೀಚೆಗೆ ಇಂಗ್ಲೆಂಡ್ ನಲ್ಲಿ ಮುಕ್ತಾಯವಾದ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿ ಬಳಿಕ ತವರಿಗೆ ಆಗಮಿಸಿದ ಆಟಗಾರ್ತಿಯರನ್ನು ಆಯಾ ರಾಜ್ಯ ಸರ್ಕಾರಗಳು ಸನ್ಮಾನಿಸುತ್ತಿದ್ದು, ಇತ್ತೀಚೆಗೆ ತೆಲಂಗಾಣ ಸರ್ಕಾರ ಕೂಡ ಮಿಥಾಲಿ  ರಾಜ್ ರನ್ನು ಆದರದಿಂದ ಬರ ಮಾಡಿಕೊಂಡು ಗೌರವಿಸಿತು. ಈ ವೇಳೆ ಸ್ವತಃ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು, ಮಿಥಾಲಿ ರಾಜ್ ರನ್ನು ಸನ್ಮಾನಿಸಿ, ಮಿಥಾಲಿ ಸಾಧನೆಯನ್ನು ಶ್ಲಾಘಿಸಿದರು.

ಇದೇ ವೇಳೆ ತೆಲಂಗಾಣ ಸರ್ಕಾರ ಮಿಥಾಲಿ ರಾಜ್ ಅವರಿಗೆ ನಿವೇಶನವನ್ನು ಉಡುಗೊರೆಯಾಗಿ ನೀಡುವುದಾಗಿ ಘೋಷಣೆ ಮಾಡಿದ್ದು, ಅಲ್ಲದೆ ಒಂದು ಕೋಟಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಅಂತೆಯೇ ಮಿಥಾಲಿ  ರಾಜ್ ಕೋಚ್ ಆರ್ ಎಸ್ ಆರ್ ಮೂರ್ತಿ ಅವರನ್ನೂ ಕೂಡ ರಾಜ್ಯ ಸರ್ಕಾರ ಸನ್ಮಾನಿಸಿದ್ದು, ಅವರಿಗೆ 25 ಲಕ್ಷ ರು.ನಗದು ಬಹುಮಾನ ಘೋಷಣೆ ಮಾಡಲಾಗಿದೆ.

ಸನ್ಮಾನ ಸಮಾರಂಭದಲ್ಲಿ ಮಿಥಾಲಿ ರಾಜ್ ಅವರ ಪೋಷಕರು ಸೇರಿದಂತೆ ಅವರ ಆಪ್ತ ಸ್ನೇಹಿತರು, ಸರ್ಕಾರದ ಇತರೆ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

ಮಡಿಕೇರಿ: 3 ದಿನಗಳಾದರೂ ಪತ್ತೆಯಾಗದ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ, ANF ನಿಂದ ತೀವ್ರ ಹುಡುಕಾಟ

ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ರಕ್ಷಿಸಿದರೆ, ಮೋದಿ ಸರ್ಕಾರ ಜನರ ಜೇಬು ಕತ್ತರಿಸುತ್ತಿದೆ: ರಂದೀಪ್ ಸಿಂಗ್ ಸುರ್ಜೆವಾಲಾ

SCROLL FOR NEXT