ಅನಿಲ್ ಕುಂಬ್ಳೆ 
ಕ್ರಿಕೆಟ್

ಕುಂಬ್ಳೆಯನ್ನೇ ಕೋಚ್ ಆಗಿ ಮುಂದುವರೆಸಲು ಸಲಹಾ ಸಮಿತಿ ಒಲವು

ಟೀಂ ಇಂಡಿಯಾದ ಕೋಚ್ ಅನಿಲ್ ಕುಂಬ್ಳೆ ವಿರುದ್ಧ ಟೀಂ ಇಂಡಿಯಾದ ಕೆಲವು ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದು ಈ ನಡುವೆ ಕುಂಬ್ಳೆಯನ್ನೇ ಕೋಚ್ ಆಗಿ...

ಲಂಡನ್: ಟೀಂ ಇಂಡಿಯಾದ ಕೋಚ್ ಅನಿಲ್ ಕುಂಬ್ಳೆ ವಿರುದ್ಧ ಟೀಂ ಇಂಡಿಯಾದ ಕೆಲವು ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದು ಈ ನಡುವೆ ಕುಂಬ್ಳೆಯನ್ನೇ ಕೋಚ್ ಆಗಿ ಮುಂದುವರೆಸಲು ಬಿಸಿಸಿಐ ಸಲಹಾ ಸಮಿತಿ ಒಲವು ವ್ಯಕ್ತಪಡಿಸಿದೆ. 
ಸಲಹಾ ಸಮಿತಿಯ ಸದಸ್ಯರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರನ್ನು ನಿನ್ನೆ ಸಂದರ್ಶನ ಮಾಡಬೇಕಿತ್ತು. ಆದರೆ ಸಮಿತಿ ಸಂದರ್ಶನ ನಡೆಸಲಿಲ್ಲ ಎಂದು ತಿಳಿದುಬಂದಿದೆ. ಈ ಮೂಲಕ 2019ರ ಏಕದಿನ ವಿಶ್ವಕಪ್ ವರೆಗೂ ಕುಂಬ್ಳೆ ಅವರೇ ಕೋಚ್ ಆಗಿರಲಿ ಎಂಬ ಅಭಿಪ್ರಾಯ ಸಮಿತಿ ಹೊಂದಿದೆ. 
ಬಿಸಿಸಿಐ ಸಹ ಮೊದಲಿಗೆ ಕುಂಬ್ಳೆ ಅವರನ್ನು ಸಂದರ್ಶನ ನಡೆಸಲು ಸಮಿತಿಗೆ ಸೂಚಿಸಿತ್ತು. ಇನ್ನು ಕುಂಬ್ಳೆ ಪರ ಅಸಮಾಧಾನಗೊಂಡಿರುವ ಕೆಲ ಆಟಗಾರರ ಮನವೊಲಿಸಲು ಸಮಿತಿ ಪ್ರಯತ್ನಿಸಿದೆ. ಅಂತ ಬೇಸರಗೊಂಡಿರುವ ಆಟಗಾರರು ಕುಂಬ್ಳೆ ಅವರು ದರ್ಪದ ನಡೆಯನ್ನು ಬಿಟ್ಟರೆ ಅವರೇ ಕೋಚ್ ಆಗಿ ಮುಂದುವರೆಯುವುದಕ್ಕೆ ನಮ್ಮ ಅಭ್ಯಂತರವೇನು ಇಲ್ಲ ಎಂದು ಹೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. 
ಇನ್ನು ಬಿಸಿಸಿಐ ಜೂನ್ 23ರಿಂದ ಆರಂಭಗೊಳ್ಳಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾದ ಕೋಚ್ ಯಾರೆಂಬುದನ್ನು ಸ್ಪಷ್ಟಪಡಿಸಿಬೇಕಿದೆ. 
ಇನ್ನು ಕುಂಬ್ಳೆ ಕಟು ವರ್ತನೆಗೆ ಬಗ್ಗೆ ಕನಿಷ್ಠ ಪಕ್ಷ ಭಾರತ ಕ್ರಿಕೆಟ್ ತಂಡದ ಆಟಗಾರರು ವಿರೋಧಿಸಿದ್ದಾರೆ. ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಬೇಕೆಂದು ಒತ್ತಾಯಿಸಿದ್ದಾರೆಂದು ಸುದ್ದಿಯಾಗಿದೆ. ಇನ್ನು ಕುಂಬ್ಳೆಯ ಆಜ್ಞೆ ಮಾಡುವ ಸ್ವಭಾವ, ಗಾಯದ ಸಂದರ್ಭದಲ್ಲಿ ಅತ್ಯಂತ ಅಮಾನವೀಯವಾದ ನಿಯಮಗಳನ್ನು ಹೇರುವುದು ತಪ್ಪು ಎಂದು ಆಟಗಾರರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT