ಅನಿಲ್ ಕುಂಬ್ಳೆ-ವಿರಾಟ್ ಕೊಹ್ಲಿ 
ಕ್ರಿಕೆಟ್

ವೆಸ್ಟ್ ಇಂಡೀಸ್ ಸರಣಿಗೂ ಕುಂಬ್ಳೆ ಕೋಚ್: ಸಿಒಎ ಮುಖ್ಯಸ್ಥ ವಿನೋದ್ ರಾಯ್

ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಅವರು ಮುಂದಿನ ವೆಸ್ಟ್ ಇಂಡೀಸ್ ವಿರುದ್ಧದ ಸರಣಿವರೆಗೂ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ನಿರ್ವಾಹಕ ಸಮಿತಿ...

ನವದೆಹಲಿ: ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಅವರು ಮುಂದಿನ ವೆಸ್ಟ್ ಇಂಡೀಸ್ ವಿರುದ್ಧದ ಸರಣಿವರೆಗೂ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ನಿರ್ವಾಹಕ ಸಮಿತಿ ಮುಖ್ಯಸ್ಥ ವಿನೋದ್ ರಾಯ್ ಅವರು ಸ್ಪಷ್ಟಪಡಿಸಿದ್ದಾರೆ. 
ಕ್ರಿಕೆಟ್ ಸಲಹಾ ಸಮಿತಿ ಟೀಂ ಇಂಡಿಯಾ ಕೋಚ್ ಆಯ್ಕೆ ಮಾಡಬೇಕಿದ್ದು, ಸದ್ಯ ಪ್ರಧಾನ ಕೋಚ್ ಆಗಿ ಸಲಹಾ ಸಮಿತಿ ಇನ್ನು ಯಾರನ್ನು ಆಯ್ಕೆ ಮಾಡಿಲ್ಲದ ಕಾರಣ ಅನಿಲ್ ಕುಂಬ್ಳೆ ಅವರೇ ವೆಸ್ಟ್ ಇಂಡೀಸ್ ಸರಣಿಗೂ ಮುಂದುವರೆಯುತ್ತಾರೆ ಎಂದು ವಿನೋದ್ ರಾಯ್ ಅವರು ಹೇಳಿದ್ದಾರೆ. 
ಜೂನ್ 23ರಿಂದ ಭಾರತ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು ಅತಿಥೇಯ ತಂಡದ ವಿರುದ್ಧ ಟೀಂ ಇಂಡಿಯಾ ಐದು ಏಕದಿನ ಪಂದ್ಯಗಳ ಸರಣಿ ಮತ್ತು ಜೂಲೈ 9 ರಂದು ಒಂದು ಟಿ20 ಪಂದ್ಯವನ್ನು ಆಡಲಿದೆ. 
ಸದ್ಯ ಚಾಂಪಿಯನ್ಸ್ ಟ್ರೋಫಿ ಹಿನ್ನೆಲೆ ಟೀಂ ಇಂಡಿಯಾ ಲಂಡನ್ ಪ್ರವಾಸಗೊಂಡಿದ್ದು ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಲಂಡನ್ ನಲ್ಲಿ ಬಿಡು ಬಿಟ್ಟಿದ್ದು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ಅನಿಲ್ ಕುಂಬ್ಳೆ ಜತೆ ಸಂಪರ್ಕದಲ್ಲಿದ್ದಾರೆ. 
ಕಳೆದ ವರ್ಷದ ಅನಿಲ್ ಕುಂಬ್ಳೆ ಅವರನ್ನು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಅನಿಲ್ ಕುಂಬ್ಳೆ ಜತೆ ಒಂದು ವರ್ಷಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು ಪ್ರಸ್ತುತ ಚಾಂಪಿಯನ್ಸ್ ಟ್ರೋಫಿ ನಂತರ ಕುಂಬ್ಳೆ ಅವರ ಒಪ್ಪಂದ ಮುಕ್ತಾಯವಾಗಲಿದೆ. ಇನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಸಹ ಆಟಗಾರರಲ್ಲಿ ಕೋಚ್ ಅನಿಲ್ ಕುಂಬ್ಳೆ ಪರ ಒಲವು ಕಡಿಮೆಯಾಗಿದ್ದು ಕೋಚ್ ಅವರನ್ನು ಬದಲಿಸಬೇಕೆಂಬ ಒತ್ತಡ ಬಿಸಿಸಿಐ ಮೇಲಿದೆ. ಅಂತೆ ಬಿಸಿಸಿಐ ನೂತನ ಕೋಚ್ ಹುದ್ದೆಗಾಗಿ ಅರ್ಜಿಗಳನ್ನು ಆಹ್ವಾನಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT