ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಭಾರತ ಲಗ್ಗೆ, ತಂಡವನ್ನು ಪ್ರಶಂಸಿಸಿದ ಸಚಿನ್, ಸೆಹ್ವಾಗ್

Vishwanath S
ನವದೆಹಲಿ: ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದು ಇದಕ್ಕೆ ಕ್ರಿಕೆಟ್ ದಿಗ್ಗಜರು ಪ್ರಶಂಸಿಸಿದ್ದಾರೆ. 
ಲಂಡನ್ ನಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಭರ್ಜರಿ 9 ವಿಕೆಟ್ ಗಳಿಂದ ಜಯ ಗಳಿಸಿತ್ತು. ಇದಕ್ಕೆ ಮಾಜಿ ಕ್ರಿಕೆಟ್ ದಿಗ್ದಜರಾದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಶಾಹೀದ್ ಅಫ್ರಿದಿ ಶುಭಾಶಯ ಹೇಳಿದ್ದಾರೆ. 
ಇದಕ್ಕೆ ಕ್ರಿಕೆಟ್ ದಿಗ್ದಜ ಸಚಿನ್ ತೆಂಡೂಲ್ಕರ್ ಅವರು ಹೆಮ್ಮೆಯ ವಿಷಯ. ಧನ್ಯವಾದ ಟೀಂ ಇಂಡಿಯಾ. ಅತ್ಯುತ್ತಮ ಪ್ರದರ್ಶನ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಶಿಖರ್ ಧವನ್, ಪಾಕಿಸ್ತಾನ ವಿರುದ್ಧದ ಫೈನಲ್ ಪಂದ್ಯಕ್ಕೆ ನನ್ನ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. 
SCROLL FOR NEXT