ಸರ್ಫರಾಜ್ ಅಹಮ್ಮದ್-ವೀರೇಂದ್ರ ಸೆಹ್ವಾಗ್ 
ಕ್ರಿಕೆಟ್

ಇಂಗ್ಲೀಷ್ ಮಾತಾಡಲು ತಡಬಡಾಯಿಸಿದ ಪಾಕ್ ನಾಯಕನ ವಿರುದ್ಧ ಟೀಕೆಗೆ ಸೆಹ್ವಾಗ್ ಆಕ್ರೋಶ

ಪಾಕಿಸ್ತಾನ ತಂಡವನ್ನು ಸರ್ಫರಾಜ್ ಅಹಮ್ಮದ್ ಮುನ್ನಡೆಸುತ್ತಿದ್ದು ಶ್ರೀಲಂಕಾ ತಂಡವನ್ನು ಮಣಿಸಿ ಸೆಮಿಫೈನಲ್ ತಲುಪಿದ ಸಂದರ್ಭದಲ್ಲಿ ನಡೆದ ಸುದ್ಧಿಗೋಷ್ಠಿ ವೇಳೆ ಇಂಗ್ಲೀಷ್ ನಲ್ಲಿ...

ಪಾಕಿಸ್ತಾನ ತಂಡವನ್ನು ಸರ್ಫರಾಜ್ ಅಹಮ್ಮದ್ ಮುನ್ನಡೆಸುತ್ತಿದ್ದು ಶ್ರೀಲಂಕಾ ತಂಡವನ್ನು ಮಣಿಸಿ ಸೆಮಿಫೈನಲ್ ತಲುಪಿದ ಸಂದರ್ಭದಲ್ಲಿ ನಡೆದ ಸುದ್ಧಿಗೋಷ್ಠಿ ವೇಳೆ ಇಂಗ್ಲೀಷ್ ನಲ್ಲಿ ಮಾತನಾಡಲು ತಡಬಡಾಸಿದ್ದರು. ಇದನ್ನು ಮುಂದಿಟ್ಟುಕೊಂಡು ಕೆಲವರು ಅವರನ್ನು ಟೀಕಿಸಿದ್ದರು. 
ಈ ಬಗ್ಗೆ ಟ್ವೀಟ್ ಮಾಡಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟೀಕಾಕಾರರಿಗೆ ಖಡಕ್ ಉತ್ತರವನ್ನು ನೀಡಿದ್ದಾರೆ. ಸರ್ಫರಾಜ್ ಅಹಮ್ಮದ್ ಅವರು ಇಂಗ್ಲೀಷ್ ನಲ್ಲಿ ಮಾತನಾಡದಿರುವುದಕ್ಕೆ ಟೀಕಿಸುವುದು ಹುಚ್ಚುತನ. ಅವರು ಬಂದಿರುವುದು ಕ್ರಿಕೆಟ್ ಆಡಲು ಅದನ್ನು ಚನ್ನಾಗಿ ನಿಭಾಯಿಸಿದ್ದಾರೆ. ತಂಡವನ್ನು ಫೈನಲ್ ಹಂತಕ್ಕೆ ಕೊಂಡೊಯ್ದಿದ್ದಾರೆ. ಇದಕ್ಕಿಂತ ಇನ್ನು ಏನು ಬೇಕು ಎಂದು ಪ್ರಶ್ನಿಸಿದ್ದಾರೆ. 
ಸರ್ಫರಾಜ್ ಗೆ ಹಿಂದಿ ಮತ್ತು ಉರ್ದು ಭಾಷೆ ಮಾತ್ರ ಸರಿಯಾಗಿ ಮಾಡನಾಡಲು ಬರುತ್ತದೆ. ಇನ್ನು ಸುದ್ದಿಗೋಷ್ಠಿಯಲ್ಲಿ ಎಲ್ಲರೂ ಆಂಗ್ಲರೇ ಇದ್ದದ್ದನ್ನು ಕಂಡ ಸರ್ಫರಾಜ್ ಗಾಬರಿಗೊಂಡಿದ್ದರು. ಇನ್ನು ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಶರ್ಪರಾಜ್ ತಮಗೆ ಗೊತ್ತಿದ್ದ ಭಾಷೆಯಲ್ಲೇ ಉತ್ತರಿಸಿದ್ದರು. 
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯ ನಾಳೆ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿದ್ದು ಸಾಂಪ್ರದಾಯಿಕ ಎದುರಾಳಿ ತಂಡಗಳು ಸೆಣೆಸುತ್ತಿರುವುದರಿಂದ ಪಂದ್ಯದ ಮೇಲೆ ಕೂತುಹಲ ಹೆಚ್ಚಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT