ಭಾರತದ ತಂಡದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ 
ಕ್ರಿಕೆಟ್

ಪಾಕ್ ಗೆಲುವಿಗೆ ಮತ್ತೆ ಅಭಿನಂದನೆ ಸಲ್ಲಿಸಿದ ಮಿರ್'ವಾಯಿಜ್ ವಿರುದ್ದ ಗಂಭೀರ್ ಕಿಡಿ

ಚಾಂಪಿಯನ್ಸ್ ಟ್ರೋಫಿ 2017 ಗೆದ್ದ ಪಾಕಿಸ್ತಾನಕ್ಕೆ ಮತ್ತೆ ಅಭಿನಂದನೆ ಸಲ್ಲಿಸಿದ ಕಾಶ್ಮೀರದ ಪ್ರತ್ಯೇಕತಾವಾದಿಗಳ ನಾಯಕ ಮಿರ್ ವಾಯಿಜ್ ಉಮರ್ ಫಾರುಖ್ ವಿರುದ್ಧ ಭಾರತದ ತಂಡದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಕಿಡಿಕಾರಿದ್ದಾರೆ...

ನವದೆಹಲಿ: ಚಾಂಪಿಯನ್ಸ್ ಟ್ರೋಫಿ 2017 ಗೆದ್ದ ಪಾಕಿಸ್ತಾನಕ್ಕೆ ಮತ್ತೆ ಅಭಿನಂದನೆ ಸಲ್ಲಿಸಿದ ಕಾಶ್ಮೀರದ ಪ್ರತ್ಯೇಕತಾವಾದಿಗಳ ನಾಯಕ ಮಿರ್ ವಾಯಿಜ್ ಉಮರ್ ಫಾರುಖ್ ವಿರುದ್ಧ ಭಾರತದ ತಂಡದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಕಿಡಿಕಾರಿದ್ದಾರೆ. 
ನಿನ್ನೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಮಿರ್ ವಾಯಿಜ್ ಅವರು ಅವರು ಪಾಕಿಸ್ತಾನ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. 
ಮಿರ್ ವಾಯಿಜ್ ಅವರು ಪಾಕಿಸ್ತಾನಕ್ಕೆ ಅಭಿನಂದನೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಿರ್ ವಾಯಿಜ್ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಗಂಭೀರ್ ಅವರು, ಗಂಟು ಮೂಟೆ ಕಟ್ಟಿಕೊಂಡು ಭಾರತದ ಗಡಿ ದಾಟಿ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿದ್ದಾರೆ. 
ಮಿರ್ ವಾಯಿಜ್ ಅವರಿಗೆ ನನ್ನದೊಂದು ಸಲಹೆ, ನೀವೇಕೆ ಗಡಿಯನ್ನು ದಾಟಬಾರದು? ಚೀನಾ ಕಡೆಯಿಂದ ನಿಮಗೆ ಒಳ್ಳೆಯ ಉಪಚಾರ ಸಿಗುತ್ತದೆ...ಅಲ್ಲಿಯೇ ನೀವು ರಂಜಾನ್ ಹಬ್ಬವನ್ನು ಆಚರಿಸಬಹುದು. ಗಂಟು ಮೂಟೆ ಕಟ್ಟಲು ನಾನೂ ಕೂಡ ನಿಮಗೆ ಸಹಾಯ ಮಾಡುತ್ತೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT