ಸಂಗ್ರಹ ಚಿತ್ರ 
ಕ್ರಿಕೆಟ್

ಸದಸ್ಯ ರಾಷ್ಟ್ರಗಳ ಸ್ವಹಿತಾಸಕ್ತಿಗಾಗಿ 2018ರ ಟಿ20 ವಿಶ್ವಕಪ್ ರದ್ದು!

ಐಸಿಸಿ ಸದಸ್ಯ ರಾಷ್ಟ್ರಗಳ ಸ್ವಹಿತಾಸಕ್ತಿಯಿಂದಾಗಿ 2018ರಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ 2020ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಲಂಡನ್: ಐಸಿಸಿ ಸದಸ್ಯ ರಾಷ್ಟ್ರಗಳ ಸ್ವಹಿತಾಸಕ್ತಿಯಿಂದಾಗಿ 2018ರಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ 2020ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಐಸಿಸಿ ಮೂಲಗಳ ಪ್ರಕಾರ ಮುಂಬರುವ 2018ರಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಬೇಕಿತ್ತು. ಆದರೆ ಐಸಿಸಿ ಸದಸ್ಯ ರಾಷ್ಟ್ರಗಳ ನಡುವಿನ ಟೂರ್ನಿಗಳಿಗೆ ದಿನಾಂಕ ನಿಗದಿಯಾಗಿರುವುದರಿಂದ 2018ರಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ರದ್ದು ಮಾಡಲಾಗಿದ್ದು, ಮುಂದಿನ ಟೂರ್ನಿ 2020ರಲ್ಲಿ ದಕ್ಷಿಣ ಆಫ್ರಿಕಾ ಅಥವಾ ಆಸ್ಟ್ರೇಲಿಯಾದಲ್ಲಿ ಆಯೋಜಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಹಿಂದೆ ಪ್ರತಿ ಎರಡು ವರ್ಷಗಳಿಗೊಮ್ಮೆ ಆಯೋಜನೆ ಆಗುತ್ತಿದ್ದ ಟಿ 20 ವಿಶ್ವಕಪ್ ಕ್ರಿಕೆಟ್ ಟೂರ್ನಿ 2018ರಲ್ಲಿ ಆಯೋಜನೆಯಾಗಬೇಕಿತ್ತು. ಆದರೆ ಸದಸ್ಯ ರಾಷ್ಟ್ರಗಳ ಮಧ್ಯೆ ಹಲವು ದ್ವಿಪಕ್ಷೀಯ ಸರಣಿಗಳು ನಡೆಯಲು ಈಗಾಗಲೇ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಟಿ20 ವಿಶ್ವಕಪ್ ರದ್ದಾಗಿದೆ ಎಂದು ಐಸಿಸಿಯ ಉನ್ನತ ಮೂಲಗಳು ತಿಳಿಸಿವೆ. ಇದೇ ಕಾರಣಕ್ಕೆ 2020ರಲ್ಲಿ ಮುಂದಿನ ಟಿ20 ವಿಶ್ವಕಪ್ ನಡೆಯಲಿದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ.

ಅಷ್ಟೇ ಅಲ್ಲದೇ ವಿವಿಧ ದೇಶಗಳು ತನ್ನದೇ ಆದ ಟಿ20 ಟೂರ್ನಿಗಳನ್ನು ಆಯೋಜಿಸುತ್ತಿರುವುದಿಂದ 2018ರಲ್ಲಿ ಐಸಿಸಿ ವಿಶ್ವಕಪ್ ಟೂರ್ನಿ ನಡೆಸದೇ ಇರಲು ನಿರ್ಧರಿಸಿದೆ. ದ್ವಿಪಕ್ಷೀಯ ಸರಣಿ ನಡೆದರೆ ಕ್ರಿಕೆಟ್ ಬೋರ್ಡ್ ಗಳಿಗೆ ಟಿವಿ ಹಕ್ಕುಗಳನ್ನು ಮಾರಾಟ ಮಾಡುವ ಮೂಲಕ ಹೆಚ್ಚಿನ ಆದಾಯ ಸಿಗುತ್ತದೆ. ಅದರಲ್ಲೂ ಭಾರತ ಯಾವುದಾದರೂ ದೇಶದ ಪ್ರವಾಸ ಕೈಗೊಂಡರೆ ಕ್ರಿಕೆಟ್ ಆಯೋಜನೆ ಮಾಡುವ ಬೋರ್ಡ್ ಗೆ ಟಿವಿ ಹಕ್ಕು ರೂಪದಲ್ಲಿ ಕೋಟಿಗಟ್ಟಲೇ ಹಣ ಸಿಗುತ್ತದೆ. ಇದೇ ಕಾರಣಕ್ಕೆ ಸದಸ್ಯ ರಾಷ್ಟ್ರಗಳು ತಮ್ಮ ಸ್ವಹಿತಾಸಕ್ತಿಗಾಗಿ ಟಿ20 ವಿಶ್ವಕಪ್ ಟೂರ್ನಿಗೆ ಆಸಕ್ತಿ ತೋರುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಏತನ್ಮಧ್ಯೆ ಮುಂದಿನ ವರ್ಷ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಬಳಿಕ ಆಸ್ಟ್ರೇಲಿಯಾಗೆ ಟೀಂ ಇಂಡಿಯಾ ಪ್ರವಾಸವನ್ನು ಕೈಗೊಳ್ಳಲಿದ್ದು, 2021ರ ಚಾಂಪಿಯನ್ಸ್ ಕ್ರಿಕೆಟ್ ಟೂರ್ನಿ ಭಾರತದಲ್ಲಿ ನಡೆಯಲಿದೆ. ಅಂತೆಯೇ ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ ಶಿಪ್ ನಡೆಸಲು ಐಸಿಸಿ ಮುಂದಾಗುತ್ತಿದ್ದು, ಸೋಮವಾರದಿಂದ ಆರಂಭವಾಗಲಿರುವ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT