ಟ್ವಿಟರ್ ಚಿತ್ರ 
ಕ್ರಿಕೆಟ್

ನಮ್ಮವರೇ ನಮ್ಮನ್ನು ಬರ್ಬಾದ್ ಮಾಡಿದರು, ಬೇರೆಯವರಿಗೆ ಆ ತಾಕತ್ತು ಎಲ್ಲಿತ್ತು: ಹಾರ್ದಿಕ್ ಪಾಂಡ್ಯಾ ಟ್ವೀಟ್!

ನಮ್ಮವರೇ ನಮ್ಮನ್ನು ಬರ್ಬಾದ್ ಮಾಡಿದರು, ಬೇರೆಯವರಿಗೆ ಆ ತಾಕತ್ತು ಎಲ್ಲಿತ್ತು ಎಂದು ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ ಟ್ವೀಟ್ ಮಾಡಿದ್ದಾರೆ.

ಲಂಡನ್: ನಮ್ಮವರೇ ನಮ್ಮನ್ನು ಬರ್ಬಾದ್ ಮಾಡಿದರು, ಬೇರೆಯವರಿಗೆ ಆ ತಾಕತ್ತು ಎಲ್ಲಿತ್ತು ಎಂದು ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ನಡೆದ ಐಸಿಸಿ ಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಸೋಲು ಕಾಣುತ್ತಿದ್ದ ಭಾರತ ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಹಾರ್ದಿಕ್ ಪಾಂಡ್ಯಾ ರನ್ ಔಟ್ ಗೆ ಬಲಿಯಾಗಿದ್ದರು. ಪಾಂಡ್ಯಾ ಔಟ್ ಆಗಿದ್ದೇ ತಡ ತಂಡದ ಉಳಿದ ಆಟಗಾರರು ತರಗೆಲೆಗಳಂತೆ ವಿಕೆಟ್ ಕೈ ಚೆಲ್ಲಿದರು. ಪರಿಣಾಮ ಭಾರತ ತಂಡ ಹೀನಾಯ ಸೋಲು ಕಂಡಿತು.

ಏತನ್ಮಧ್ಯೆ ನಿನ್ನೆ ರಾತ್ರಿ ಸುಮಾರು 10.15ರ ವೇಳೆ ಟ್ವೀಟ್ ಮಾಡಿದ್ದ ಹಾರ್ದಿಕ್ ಪಾಂಡ್ಯಾ, ನಮ್ಮವರೇ ನಮ್ಮನ್ನು ಬರ್ಬಾದ್ ಮಾಡಿದರು, ಬೇರೆಯವರಿಗೆ ಆ ತಾಕತ್ತು ಎಲ್ಲಿತ್ತು ಎಂದು ಆಕ್ರೋಶ ಭರಿತರಾಗಿ ಟ್ವೀಟ್ ಮಾಡಿದ್ದರು. ಇದೀಗ ಆ ಟ್ವೀಟ್ ವ್ಯಾಪಕ ವೈರಲ್ ಆಗಿದ್ದು, ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪಾಂಡ್ಯಾ ಟ್ವೀಟ್ ಡಿಲೀಟ್ ಮಾಡಿದ್ದರೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ವ್ಯಾಪಕ ವೈರಲ್ ಆಗಿದೆ.

ಹಾರ್ದಿಕ್ ಪಾಂಡ್ಯಾ ಟ್ವೀಟ್ ಅನ್ನು ಪ್ರಿಂಟ್ ಸ್ಕ್ರೀನ್ ತೆಗೆದುಕೊಂಡಿರುವ ಕೆಲ ಟ್ವೀಟಿಗರು ಅದನ್ನೇ ಅಪ್ಲೋಡ್ ಮಾಡಿ ವ್ಯಾಪಕ ಚರ್ಚೆ ನಡೆಸುತ್ತಿದ್ದಾರೆ. ಪಾಂಡ್ಯಾ ರನ್ ಔಟ್ ಗೆ ರವೀಂದ್ರ ಜಡೇಜಾ ಅವರೇ ಕಾರಣ ಎಂಬ ಅರ್ಥದಲ್ಲಿ ಜಡ್ಡು ವಿರುದ್ಧ ವ್ಯಾಪಕ ಟೀಕೆಗಳು ಹರಿದುಬರುತ್ತಿದೆ.

ಇನ್ನು ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯಾ 43 ಎಸೆತಗಳಲ್ಲಿ 76 ರನ್ ಸಿಡಿಸಿದ್ದರು. ಅವರ ಈ ಭರ್ಜರಿ ಆಟದಲ್ಲಿ 6 ಸಿಕ್ಸರ್ ಹಾಗೂ 4 ಬೌಂಡರಿ ಸಿಡಿಸಿದ್ದರು. ಆದರೆ ತಂಡದ ಆಟಗಾರ ರವೀಂದ್ರ  ಜಡೇಜಾ ಅವರ ಅಜಾಗರೂಕ ನಡೆಯಿಂದ ಪಾಂಡ್ಯಾ ರನ್‌ ಔಟ್‌ ಆಗಿದ್ದರು. ಇದೇ ಬೇಸರದಲ್ಲಿ ಪೆವಿಲಿಯನ್‌ ಸೇರಿದ ಬಳಿಕ ಪಾಂಡ್ಯಾ ಯಾರೊಂದಿಗೂ ಮಾತನಾಡದೇ ಟ್ವಿಟರ್‌ನಲ್ಲಿ ರೀಟ್ವೀಟ್‌ ಮಾಡಿಕೊಳ್ಳುತ್ತಾ ಬ್ಯುಸಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT